ರಾಯಚೂರು:ತಿರುಪತಿ ಶ್ರೀವೆಂಕಟೇಶ್ವರ ದೇವಾಲಯದಲ್ಲಿ ಧರ್ಮ ಗುರುಗಳು, ಮಠಾಧೀಶರಿಗೆ ನೇರ ದರ್ಶನಕ್ಕೆ ನಿರ್ಬಂಧ ಹೇರಿರುವುದಕ್ಕೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬ್ರಿಟಿಷರ ಕಾಲದಿಂದಲೂ ದೇವಾಲಯಗಳಲ್ಲಿ ಧಾರ್ಮಿಕ ಗುರುಗಳು ಮತ್ತು ಮಠಾಧೀಶರಿಗೆ ದೇಗುಲದಲ್ಲಿ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಆದರೆ ಈಗಿನ ಆಡಳಿತಾಧಿಕಾರಿಗಳು ಮಠಾಧೀಶರಿಗೆ ಅಗೌರವ ತೋರುವ ರೀತಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಕೂಡಲೇ ಇದರ ಬಗ್ಗೆ ಆಳಿತಾಧಿಕಾರಿಗಳು ಒಗ್ಗೂಡಿ ಚರ್ಚೆ ನಡೆಸಿ ತಿರ್ಮಾನ ಕೈಗೊಳ್ಳಬೇಕೆಂದು ಕಿವಿ ಮಾತು ಹೇಳಿದ್ರು.