ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಬ ಒಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ.. ಓರ್ವ ಸಾವು, 6 ಮಂದಿಗೆ ಗಾಯ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

By

Published : Jun 14, 2021, 8:39 PM IST

ಓರ್ವ ಮೃತಿ
ಓರ್ವ ಮೃತಿ

ರಾಯಚೂರು :ವಿದ್ಯುತ್ ಕಂಬಗಳನ್ನು ಹಾಕಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಪಲ್ಟಿಯಾಗಿ ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟು 6 ಮಂದಿ ಗಾಯಗೊಂಡಿರುವ ಘಟನೆ ರಾಯಚೂರಿನ ಬೀಜನಗೇರಾ ಗ್ರಾಮದಲ್ಲಿ ನಡೆದಿದೆ. ವೈ.ಮಲ್ಲಾಪುರ ಗ್ರಾಮದ ಕೂಲಿ ಕಾರ್ಮಿಕ ಪ್ರಾಣೇಶ(30) ಮೃತ ವ್ಯಕ್ತಿ. ಗಾಯಗೊಂಡ 6 ಮಂದಿಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇನ್ನುಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಕೂಲಿ ಕಾರ್ಮಿಕರು ರಾಯಚೂರಿನಿಂದ ಬೀಜನಗೇರಾ ಕಡೆಗೆ ಟ್ರ್ಯಾಕ್ಟರ್​ನಲ್ಲಿ ವಿದ್ಯುತ್ ಕಂಬಗಳನ್ನು ಹಾಕಿಕೊಂಡು ತೆರಳಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್ ರಸ್ತೆಯ ಬದಿಯ ತೆಗ್ಗಿನ ಕಡೆ ವಾಲಿದ ಪರಿಣಾಮ ಟ್ರಾಲಿ ಪಲ್ಟಿಯಾಗಿದೆ. ಟ್ರಾಲಿಯಲ್ಲಿದ್ದ ಕೂಲಿ ಕಾರ್ಮಿಕರ ಮೇಲೆ ವಿದ್ಯುತ್ ಕಂಬಗಳು ಬಿದ್ದಿವೆ.

ಇದರ ಪರಿಣಾಮ ಪ್ರಾಣೇಶ್ ಸ್ಥಳದಲ್ಲೇ ಮೃತಪಟ್ಟರೆ, ಇನ್ನುಳಿದ 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ.

ಓದಿ.. CD case:ಎಫ್ಐಆರ್ ಪ್ರಶ್ನಿಸಿ ಯುವತಿ ಅರ್ಜಿ.. ಜಾರಕಿಹೊಳಿಗೆ ಹೈಕೋರ್ಟ್ ನೋಟಿಸ್

ABOUT THE AUTHOR

...view details