ರಾಯಚೂರು :ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಸಿರವಾರ ಠಾಣೆ ಪೊಲೀಸರು ರಕ್ಷಣೆ ಒದಗಿಸುತ್ತಿಲ್ಲವೆಂದು ಯುವಕನ ತಾಯಿ ಆರೋಪಿಸಿದ್ದಾಳೆ. ಜಿಲ್ಲೆಯ ಲಿಂಗಸೂಗೂರಿನ ಮೀನಾಕ್ಷಿ ಅವರ ಮಗ ಅಮರೇಶ್ ಹಾಗೂ ಸಿರವಾರ ತಾಲೂಕಿನ ಸುಮಾ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಜುಲೈ 1ರಂದು ಇವರಿಬ್ಬರು ಲಿಂಗಸೂಗೂರು ಸಬ್ ರಿಜಿಸ್ಟರ್ ಆಫೀಸ್ನಲ್ಲಿ ವಿವಾಹವಾಗಿದ್ದರು. ವಿವಾಹದ ಬಳಿಕ ಇವರು ಮೈಸೂರಿನಲ್ಲಿ ನೆಲೆಸಿದ್ದರು.
ಆದರೆ, ಸುಮಾಳ ತಂದೆ ಗೋವಿಂದಪ್ಪ ಹೊಸಮನಿ ಯುವತಿ ಕಾಣೆಯ ಕುರಿತು ಸಿರವಾರ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಅಮರೇಶನನ್ನು ಸಂಪರ್ಕಿಸಿ ರಕ್ಷಣೆ ನೀಡುವುದಾಗಿ ಹೇಳಿ ಕರೆಸಿಕೊಂಡಿದ್ದಾರೆ. ಅಮರೇಶ್, ಸುಮಾ ಇಬ್ಬರು ಸಿರವಾರ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆದ್ರೆ, ಪೊಲೀಸ್ ಠಾಣೆಗೆ ಬಂದಾಗ ಸುಮಾಳ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ರು. ಆಗ ಇಬ್ಬರನ್ನ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ.