ಕರ್ನಾಟಕ

karnataka

ETV Bharat / state

ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆ ವಿಭೂತಿ ಕೆರೆ ಬಳಿ ನಿಗೂಢ ಸಾವು - ರಾಮನಗರದ ಜಿಲ್ಲಾ ಸುದ್ದಿ

ಕಳೆದ ರಾತ್ರಿ ಆಹಾರ ಅರಸಿ ನಾಡಿಗೆ ಲಗ್ಗೆಯಿಟ್ಟಿದ್ದ ಚಿರತೆಯೂಂದು ವಿಭೂತಿ ಕೆರೆ ಗ್ರಾಮದ ಜಮೀನಿನಲ್ಲಿ ನಿಗೂಢವಾಗಿದೆ ಸಾವನ್ನಪ್ಪಿದೆ. ಇತ್ತೀಚಿಗೆ ಈ ಬಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಪರಿಚಿತರು ಗುಂಡು ಹೊಡೆದು ಚಿರತೆಯನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿರತೆ ಸಾವು

By

Published : Sep 29, 2019, 6:23 PM IST

ರಾಮನಗರ: ನಿಗೂಢ ರೀತಿಯಲ್ಲಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.

ಕಳೆದ ರಾತ್ರಿ ಆಹಾರ ಅರಸಿ ನಾಡಿಗೆ ಲಗ್ಗೆಯಿಟ್ಟಿದ್ದ ಜಮೀನಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದೆ. ಇತ್ತೀಚಿಗೆ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಗುಂಡು ಹೊಡೆದು ಚಿರತೆಯನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿರತೆಯ ನಿಗೂಢ ಸಾವು

ಚಿರತೆ ಕಳೇಬರ ಪತ್ತೆಯಾದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವ ಪರೀಕ್ಷೆಯ ನಂತರ ಸಾವಿನ ನಿಖರ ಮಾಹಿತಿ ದೊರೆಯಲಿದೆ ಎಂದು ತಿಳಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details