ರಾಮನಗರ:ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ಯಾಕೇಜ್ಗಳು ಬೋಗಸ್ ಆಗಿವೆ. ದೇಶ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಬಡವರ ಜೇಬಿನಲ್ಲಿ ದುಡ್ಡು ಇರಬೇಕು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಮಾಗಡಿ ತಾಲೂಕಿನ ಕುದೂರು ಹೋಬಳಿಯಲ್ಲಿ ಕಾಂಗ್ರೆಸ್ ವತಿಯಿಂದ ಬಡವರಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯಾದಾಗಿನಿಂದಲೂ ನರೇಂದ್ರ ಮೋದಿಯವರು ಸಾಕಷ್ಟು ಸುಳ್ಳು ಹೇಳಿದ್ದಾರೆ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರ ಲಾಕ್ಡೌನ್ ಸಂದರ್ಭದಲ್ಲಿ ಬಡವರಿಗೆ ವಿಶೇಷ ಪ್ಯಾಕೇಜ್ಗಳನ್ನು ಘೋಷಣೆ ಮಾಡುವ ಮೂಲಕ, ಆರ್ಥಿಕವಾಗಿ ಬಡವರನ್ನ ಸದೃಢಗೊಳಿಸಬೇಕಿತ್ತು ಆದರೆ ಎರಡೂ ಸರ್ಕಾರಗಳು ಜನರಿಗೆ ಸುಳ್ಳು ಭರವಸೆ ನೀಡುತ್ತಿವೆ ಎಂದು ಆರೋಪಿಸಿದರು. ನರೇಂದ್ರ ಮೋದಿ ಪ್ರಧಾನಿ ಆದಾಗ ಸುಳ್ಳು ಹೇಳಿದ್ದರು. ಇದೀಗ ಮತ್ತೆ ಸುಳ್ಳು ಹೇಳ್ತಿದ್ದಾರೆ.
ಈಗ ಪರಿಸ್ಥಿತಿ ಕಷ್ಟದಲ್ಲಿದೆ, ಆರ್ಥಿಕವಾಗಿ ಚೇತರಿಕೆಗೋಸ್ಕರ ಲಾಕ್ಡೌನ್ ಸಡಿಲಿಕೆ ಮಾಡಿದ್ದಾರೆ ಅಷ್ಟೇ. ಸರ್ಕಾರಕ್ಕೆ ನಾವೇ ಮೂರ್ನಾಲ್ಕು ಸಾರಿ ಹೋಗಿ ಮನವಿ ಮಾಡಿದ್ದೇವೆ. ಆದರೆ, ಈ ಸರ್ಕಾರ ಬೇಜವಾಬ್ದಾರಿ ಹಾಗೂ ಜನವಿರೋಧಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.