ಕರ್ನಾಟಕ

karnataka

ಕೇಂದ್ರ ಸರ್ಕಾರದ ಪ್ಯಾಕೇಜ್ ಬೋಗಸ್: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ..!

ಮಾಗಡಿ ತಾಲೂಕಿನ ಕುದೂರು ಹೋಬಳಿಯಲ್ಲಿ ಕಾಂಗ್ರೆಸ್​​​​ನಿಂದ ಬಡವರಿಗೆ ಪಡಿತರ ಕಿಟ್ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

By

Published : May 23, 2020, 10:43 PM IST

Published : May 23, 2020, 10:43 PM IST

Distribution of ration kit by Congress in ramanagar
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ರಾಮನಗರ:ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ಯಾಕೇಜ್​​​​​​ಗಳು ಬೋಗಸ್​​ ಆಗಿವೆ. ದೇಶ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಬಡವರ ಜೇಬಿನಲ್ಲಿ ದುಡ್ಡು ಇರಬೇಕು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮಾಗಡಿ ತಾಲೂಕಿನ ಕುದೂರು ಹೋಬಳಿಯಲ್ಲಿ ಕಾಂಗ್ರೆಸ್ ವತಿಯಿಂದ ಬಡವರಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯಾದಾಗಿನಿಂದಲೂ ನರೇಂದ್ರ ಮೋದಿಯವರು ಸಾಕಷ್ಟು ಸುಳ್ಳು ಹೇಳಿದ್ದಾರೆ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಸರ್ಕಾರ ಲಾಕ್​​ಡೌನ್ ಸಂದರ್ಭದಲ್ಲಿ ಬಡವರಿಗೆ ವಿಶೇಷ ಪ್ಯಾಕೇಜ್​​ಗಳನ್ನು ಘೋಷಣೆ ಮಾಡುವ ಮೂಲಕ, ಆರ್ಥಿಕವಾಗಿ ಬಡವರನ್ನ ಸದೃಢಗೊಳಿಸಬೇಕಿತ್ತು ಆದರೆ ಎರಡೂ ಸರ್ಕಾರಗಳು ಜನರಿಗೆ ಸುಳ್ಳು ಭರವಸೆ ನೀಡುತ್ತಿವೆ ಎಂದು ಆರೋಪಿಸಿದರು. ನರೇಂದ್ರ ಮೋದಿ ಪ್ರಧಾನಿ ಆದಾಗ ಸುಳ್ಳು ಹೇಳಿದ್ದರು. ಇದೀಗ‌ ಮತ್ತೆ ಸುಳ್ಳು‌ ಹೇಳ್ತಿದ್ದಾರೆ.

ಈಗ ಪರಿಸ್ಥಿತಿ ಕಷ್ಟದಲ್ಲಿದೆ, ಆರ್ಥಿಕವಾಗಿ ಚೇತರಿಕೆಗೋಸ್ಕರ ಲಾಕ್​​​​​ಡೌನ್ ಸಡಿಲಿಕೆ ಮಾಡಿದ್ದಾರೆ ಅಷ್ಟೇ. ಸರ್ಕಾರಕ್ಕೆ ನಾವೇ ಮೂರ್ನಾಲ್ಕು ಸಾರಿ ಹೋಗಿ ಮನವಿ ಮಾಡಿದ್ದೇವೆ. ಆದರೆ, ಈ ಸರ್ಕಾರ ಬೇಜವಾಬ್ದಾರಿ ಹಾಗೂ ಜನವಿರೋಧಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details