ಕರ್ನಾಟಕ

karnataka

By

Published : Aug 2, 2022, 8:37 PM IST

ETV Bharat / state

ದುಡ್ಡಿನ ಮದದಿಂದ ಸಚಿವ ಅಶ್ವತ್ಥ್​ ನಾರಾಯಣ್​ ಮಾತನಾಡುತ್ತಿದ್ದಾರೆ: ಹೆಚ್​ಡಿಕೆ

ಬಿಜೆಪಿ ಅಧಿಕಾರಕ್ಕೆ ಬರಲು ಹಿಂದುತ್ವದ ಹೆಸರಿನಲ್ಲಿ ಮನೆಯಲ್ಲಿ ನೆಮ್ಮದಿಯಿಂದಿದ್ದ ಯುವಕರನ್ನು ಕರೆತಂದರು. ಈಗ ನೋಡಿದರೆ ನಾವು ಹೇಳಿದ ಹಾಗೆಯೇ ‌ಕೇಳಬೇಕು ಎಂದು ಅಪ್ಪಣೆ ಮಾಡುತ್ತಿದ್ದಾರೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಟೀಕಿಸಿದರು.

ಹೆಚ್​ಡಿಕೆ
ಹೆಚ್​ಡಿಕೆ

ರಾಮನಗರ: ಮನೆಗೆ ಬೆಂಕಿ ಬಿದ್ದಾಗ ಅಡುಗೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಡಾ.ಅಶ್ವತ್ಥ್​ನಾರಾಯಣ್​ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಡದಿಯ ತಮ್ಮ ತೋಟದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಚಿವರಾದವರು ತಲೆಯಲ್ಲಿ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ನಾಲಿಗೆ ಹೊರಳಿದ ಹಾಗೆಲ್ಲ ಮಾತನಾಡುವುದು ಸರಿಯಲ್ಲ ಎಂದರು. ಡಿ.ಕೆ.ಸಹೋದರರ ಜತೆ ಆಡಿದ ಆಟವನ್ನು ನನ್ನ ಹತ್ತಿರ ಆಡಿದರೆ ನಡೆಯಲ್ಲ. ಕುಮಾರಸ್ವಾಮಿ ಹತ್ತಿರ ಇದೆಲ್ಲ ಸಾಗುವುದಿಲ್ಲ. ದುಡ್ಡಿನ ಮದದಿಂದ ಅಶ್ವತ್ಥ್​ ನಾರಾಯಣ್​ ಹೀಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಮಾತನಾಡಿದರು

ಅಮಿತ್‌ ಶಾ ಭೇಟಿ ಬಗ್ಗೆ ಲೇವಡಿ:ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜ್ಯ ಭೇಟಿ ಬಗ್ಗೆ ಕುಟುಕಿದ ಅವರು, ಇನ್ನೊಂದಷ್ಟು ಹೆಣಗಳನ್ನು ಬೀಳಿಸಲು ಅವರು ರಾಜ್ಯಕ್ಕೆ ಬರುತ್ತಿರಬೇಕು. ಗುಜರಾತ್​ನಲ್ಲಿನ ಹತ್ಯೆಗಳನ್ನೇ ಇಲ್ಲಿ ಮುಂದುವರೆಸಲು ಬರುತ್ತಿರಬಹುದು. ಚುನಾವಣೆ ಸಮಯದಲ್ಲಿ ನರಹತ್ಯೆ ನಡೆಸಿ, ರಾಜಕೀಯ ಮಾಡುವುದೇ ಬಿಜೆಪಿಯ ಹುಟ್ಟುಗುಣ ಎಂದರು.

ಸಿದ್ದರಾಮೋತ್ಸವದ ಬಗ್ಗೆ ಆಸಕ್ತಿ ಇಲ್ಲ: ಸಿದ್ದರಾಮೋತ್ಸವದ ಬಗ್ಗೆ ನನಗೇನೂ ಆಸಕ್ತಿ ಇಲ್ಲ. ಅವರು ಏನೋ ಮಾಡುತ್ತಿದ್ದಾರೆ. ಅದರ ಬಗ್ಗೆ ನಾನ್ಯಾಕೆ ಚಿಂತೆ ಮಾಡಲಿ?. ಅವರ ಪಾಡಿಗೆ ಅವರು ಮಾಡಿಕೊಳ್ಳಲಿ ಬಿಡಿ. ಐದಲ್ಲದಿದ್ದರೆ ಇಪ್ಪತ್ತು ಲಕ್ಷ ಜನರನ್ನು ತೋರಿಸಲಿ. ಅವರ ನಾಯಕತ್ವದ ಬಗ್ಗೆ ದೆಹಲಿಗೆ ಪ್ರದರ್ಶನ ಮಾಡಲಿ. ಇದರಿಂದ ಅವರ ಪಕ್ಷದಲ್ಲಿ ಬೆಂಕಿ‌ ಹಂಚಿಕೊಳ್ಳುತ್ತದೆ. ನಮಗೇನು ಸಮಸ್ಯೆ? ಎಂದು ಹೇಳಿದರು.

ಇದನ್ನೂ ಓದಿ:ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಪ್‌ ಮುಖಂಡರು

ABOUT THE AUTHOR

...view details