ರಾಮನಗರ : ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ನಿಮ್ಮ ಮನೆ ಮಗನನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಭೆ ಚುನಾವಣೆಯಲ್ಲಿ ಹಿನ್ನೆಲೆ ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಆದ್ದರಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಒಂದು ದಿನ ಮಾತ್ರ ಬಂದು ನಿಮ್ಮನ್ನು ಭೇಟಿಯಾಗಬಹುದು. ಮುಂಬರುವ ಚುನಾವಣೆಯಲ್ಲಿ 120 ಸೀಟು ಗೆಲ್ಲಲು ರಾಜ್ಯಾದ್ಯಂತ ಪ್ರವಾಸ ಮಾಡಬೇಕಿದೆ. ನಿಮ್ಮ ಮನೆ ಮಗನನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನಿಮಗೆ ಸೇರಿದ್ದು. ರಾಜ್ಯದಲ್ಲಿ ಜನತಾದಳದ ಸ್ವತಂತ್ರ ಸರ್ಕಾರ ತರಲು ಹೊರಟಿದ್ದೇನೆ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ ಎಂದು ಜನರಲ್ಲಿ ಮನವಿ ಮಾಡಿದರು.