ರಾಮನಗರ:ಜಮೀನಿನಲ್ಲಿ ಕುರಿ ಕಾಯುತ್ತಿದ್ದ ಕುರಿಗಾಹಿಯ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ, ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ನರಸಿಂಹ(42) ಎಂಬ ಕುರಿಗಾಹಿ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ.
ರಾಮನಗರದಲ್ಲಿ ಕುರಿಗಾಹಿ ಮೇಲೆ ಚಿರತೆ ದಾಳಿ - leopard attack in Ramanagara
ಕುರಿಗಾಹಿಯ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ, ರಾಮನಗರ ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.
![ರಾಮನಗರದಲ್ಲಿ ಕುರಿಗಾಹಿ ಮೇಲೆ ಚಿರತೆ ದಾಳಿ ರಾಮನಗರದಲ್ಲಿ ಕುರಿಗಾಹಿ ಮೇಲೆ ಚಿರತೆ ದಾಳಿ](https://etvbharatimages.akamaized.net/etvbharat/prod-images/768-512-5460289-thumbnail-3x2-smk.jpg)
ರಾಮನಗರದಲ್ಲಿ ಕುರಿಗಾಹಿ ಮೇಲೆ ಚಿರತೆ ದಾಳಿ
ಎಂದಿನಂತೆ ತಮ್ಮ ಜಮೀನಿನಲ್ಲಿ ಕುರಿ ಮೇಯಿಸುತ್ತಿರುವಾಗ, ಚಿರತೆಯು ಕುರಿಗಳನ್ನು ತಿನ್ನಲು ಬಂದಿದೆ. ಈ ವೇಳೆ ಅಡ್ಡ ಬಂದ ಕುರಿಗಾಹಿ ಮೇಲೂ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗಾಯಗೊಂಡಿರುವ ನರಸಿಂಹನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿ ಭೇಟಿ ಮಾಡಿದ್ದಾರೆ.
TAGGED:
leopard attack in Ramanagara