ರಾಮನಗರ: ನನ್ನ ಪತಿ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದಕ್ಕೂ ಹೆದರದೇ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಏನೇ ಆಗಲಿ ಪಾರದರ್ಶಕವಾಗಿ ಸಿಬಿಐ ತನಿಖೆ ನಡೆಯಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ ತಪ್ಪು ಮಾಡಿಲ್ಲ, ಅವ್ರು ಯಾವುದಕ್ಕೂ ಹೆದರೊಲ್ಲ: ಅನಿತಾ ಕುಮಾರಸ್ವಾಮಿ - ಅನಿತಾ ಕುಮಾರಸ್ವಾಮಿ
ಹೆಚ್ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ. ಸಿಬಿಐ ಕೂಡ ಮುಕ್ತ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ
ಹೆಚ್ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ
ನಗರದಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೆಚ್ಡಿಕೆ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ಯಡಿಯೂರಪ್ಪ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅನಿತಾ, ಈಗಾಗಲೇ ಕುಮಾರಸ್ವಾಮಿ ಅವರು ಆ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ರು.