ರಾಮನಗರ:ಪತಿಯ ಸಾವಿನಿಂದ ತೀವ್ರವಾಗಿ ಮನನೊಂದ ಗರ್ಭಿಣಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕನಕಪುರದ ಬಸವೇಶ್ವರ ನಗರದಲ್ಲಿ ನಡೆದಿದೆ.
ಕನಕಪುರ ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ ನಂದಿನಿ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಶಾಂತಮಲ್ಲಪ್ಪ ಕೆಇಬಿಯಲ್ಲಿ ಲೈನ್ಮ್ಯಾನ್ ಆಗಿದ್ದು, ಕೆಲಸದಲ್ಲಿ ಇದ್ದಾಗಲೇ ಸಾವನ್ನಪ್ಪಿದ್ದರು. ಅನುಕಂಪದ ಆಧಾರದ ಮೇಲೆ ಮಗಳಿಗೆ ಮೂರು ವರ್ಷಗಳ ಹಿಂದೆ ಬೆಸ್ಕಾಂನಲ್ಲಿ ತಂದೆಯ ಕೆಲಸ ಸಿಕ್ಕಿತ್ತು.
ಎರಡು ವರ್ಷಗಳ ಹಿಂದೆ ಮೈಸೂರು ಮೂಲದ ಉದ್ಯಮಿ ಸತೀಶ್ ಎಂಬುವರನ್ನು ನಂದಿನಿ ಪ್ರೀತಿಸಿ ವಿವಾಹವಾಗಿದ್ದು, ಇಲ್ಲಿನ ಬಸವೇಶ್ವರ ನಗರದಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ಸತೀಶ್ ಅವರ ತಾಯಿ ಮೈಸೂರಿನಲ್ಲಿ ನೆಲೆಸಿದ್ದಾರೆ. ಸತೀಶ್ ವ್ಯವಹಾರದ ಜತೆಗೆ ಕನಕಪುರ ಮತ್ತು ಮೈಸೂರಿಗೆ ಓಡಾಡಿಕೊಂಡಿದ್ದು, ನಂದಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದರು.