ಬೆಂಗಳೂರು: ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ರಾಮನಗರ, ಚನ್ನಪಟ್ಟಣದ ಲಾಕ್ಡೌನ್ : ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಹೆಚ್ಡಿಕೆ - Ramanagar, Channapattana Lock Down
ಕೊರೊನಾ ಹರಡುವಿಕೆ ತಡೆಗಟ್ಟುವ ಸಲುವಾಗಿ ರಾಮನಗರ-ಚನ್ನಪಟ್ಟಣದಲ್ಲಿ ಲಾಕ್ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಹೆಚ್ಡಿಕೆ
ಪತ್ರದ ಸಾರಾಂಶ : 'ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಸಮುದಾಯಕ್ಕೆ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗ್ಗೆ 7 ಗಂಟೆಯಿಂದ 11.00 ಗಂಟೆಯವರೆಗೆ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ. 11 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ, ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ' ಪತ್ರದಲ್ಲಿ ಕೋರಿದ್ದಾರೆ.