ಕರ್ನಾಟಕ

karnataka

ETV Bharat / state

ಉತ್ತರ ಪ್ರದೇಶದ ಸಿಎಂ ಭೇಟಿ ಮಾಡಿದ ಸಚಿವ ಅಶ್ವತ್ಥನಾರಾಯಣ - ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ರಾಮನಗರದಲ್ಲಿ ತಯಾರಿಸಿದ ರೇಷ್ಮೆ ಶಾಲು, ಹಾರ ಮತ್ತು ಪೇಟಾಗಳನ್ನು ಹಾಕಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಸನ್ಮಾನಿಸಿದರು.

Ramanagara pilgrims visited Uttar Pradesh CM
ಉತ್ತರ ಪ್ರದೇಶದ ಸಿಎಂ ಭೇಟಿ ಮಾಡಿದ ರಾಮನಗರ ಯಾತ್ರಾರ್ಥಿಗಳು

By

Published : Dec 16, 2022, 1:35 PM IST

ಉತ್ತರ ಪ್ರದೇಶದ ಸಿಎಂ ಭೇಟಿ ಮಾಡಿದ ರಾಮನಗರ ಯಾತ್ರಾರ್ಥಿಗಳು

ರಾಮನಗರ:ರಾಮನಗರ ಜಿಲ್ಲೆಯಿಂದ ಉಸ್ತುವಾರಿ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಅವರ‌ ನೇತೃತ್ವದಲ್ಲಿ ಉತ್ತರ ಪ್ರದೇಶಕ್ಕೆ ತೆರಳಿರುವ 150 ಯಾತ್ರಾರ್ಥಿಗಳ ತಂಡವನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು.

ಒಂದು ಗಂಟೆಗೂ ಹೆಚ್ಚು ಕಾಲ ನಿಯೋಗದ ಜತೆಗಿದ್ದ ಅವರು, ಪ್ರತಿಯೊಬ್ಬರನ್ನೂ ಪರಿಚಯ ಮಾಡಿಕೊಂಡು, ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಯೋಗಿ ಅವರಿಗೆ ರಾಮನಗರದಲ್ಲಿ ತಯಾರಿಸಿದ ರೇಷ್ಮೆ ಶಾಲು, ಹಾರ ಮತ್ತು ಪೇಟಗಳನ್ನು ಹಾಕಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಕರ್ನಾಟಕದ ಆದಿಚುಂಚನಗಿರಿ ಮಠ, ಕಾಲಬೈರವ ಮತ್ತು ಮಂಜುನಾಥ ಸ್ವಾಮಿ ಹಾಗೂ ಉತ್ತರ ಪ್ರದೇಶದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಗಟ್ಟಿ ಆಗುತ್ತಿದೆ. ಇದಲ್ಲದೆ ಎರಡೂ ರಾಜ್ಯಗಳಲ್ಲಿ ನಾಥ ಸಂಪ್ರದಾಯದ ಪ್ರಭಾವ ಇದೆ. ನಮ್ಮ ನಡುವೆ ಕೊಡುಕೊಳ್ಳುವಿಕೆ ಮತ್ತಷ್ಟು ಹೆಚ್ಚಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಅಶ್ವತ್ಥನಾರಾಯಣ ಮಾತನಾಡಿ, ರಾಮನಗರದ ಪುರಾತನ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಬೇಕು ಮತ್ತು ಮಾರ್ಗದರ್ಶನ ಮಾಡಬೇಕು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂಗಿತವೂ ಆಗಿದೆ ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೋರಿದರು.

ಈ ಸಂದರ್ಭದಲ್ಲಿ ಸಚಿವರು ರಾಮನಗರ ಮತ್ತು ರಾಮನ ನಡುವಿನ ಬಾಂಧವ್ಯವನ್ನು ವಿವರಿಸಿದರು. ರಾಮನಗರದ ಭಕ್ತರು ಜಯಘೋಷಗಳನ್ನು ಮೊಳಗಿಸಿದರು.

ಇದನ್ನೂ ಓದಿ:ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಸಿಎಂ ಬೊಮ್ಮಾಯಿ ಸನ್ಮಾನ

ABOUT THE AUTHOR

...view details