ರಾಮನಗರ: ಜಿಲ್ಲಾ ಉಸ್ತುವಾರಿ ಸಚಿವರ ನಡೆ ಹಾಗೂ ಸರ್ಕಾರದ ಬೇಜವಬ್ದಾರಿತನದ ಫಲವಾಗಿ ಗ್ರೀನ್ ಝೋನ್ನಲ್ಲಿದ್ದ ರಾಮನಗರ ಜಿಲ್ಲೆ ರೆಡ್ ಝೋನ್ಗೆ ಸ್ಥಿತಿಗೆ ಮರಳಿದೆ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಿಡಿಕಾರಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾಡಿದ ತಪ್ಪು ನಿರ್ಧಾರದಿಂದಾಗಿ ಇಂದು ನಮ್ಮ ಜಿಲ್ಲೆಗೆ ಅನ್ಯಾಯವಾಗಿದೆ. ಇದರಿಂದ ವ್ಯಾಪರ ವಹಿವಾಟು ನಿಂತು, ಜಿಲ್ಲೆಗೆ ಸಾಕಷ್ಟು ನಷ್ಟವಾಗಿದೆ. ಈ ನಷ್ಟವನ್ನ ಸರ್ಕಾರ ಇಲ್ಲವೇ ಉಸ್ತುವಾರಿ ಸಚಿವರೇ ಭರಿಸಬೇಕು ಎಂದು ಆಗ್ರಹಿಸಿದರು.