ಕರ್ನಾಟಕ

karnataka

ETV Bharat / state

'ಈ ಬಜೆಟ್​ನಲ್ಲಿ ಏನೂ ಇಲ್ಲ, ಇದು ಬಡವರ ವಿರೋಧಿ'

ಇಂದು ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್​ ಶ್ರೀಸಾಮಾನ್ಯನಿಗೆ ಪ್ರಯೋಜನವಿಲ್ಲ. ಪೆಟ್ರೋಲ್-ಡೀಸೆಲ್ ಮೇಲೆ ಸೆಸ್ ಹಾಕೋದ್ರಿಂದ ಬಡವರಿಗೆ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರದ ಬಜೆಟ್​ನಲ್ಲಿ ಏನೂ ವಿಶೇಷವಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

By

Published : Jul 6, 2019, 3:14 AM IST

ಈ ಬಜೆಟ್ ಜನ ವಿರೋಧಿ,ಬಡವರ ವಿರೋಧಿ

ಬೆಂಗಳೂರು/ರಾಮನಗರ:ಈ ಬಜೆಟ್ ಶ್ರೀಸಾಮಾನ್ಯನಿಗೆ ಪ್ರಯೋಜನವಿಲ್ಲ. ಪೆಟ್ರೋಲ್ ಡೀಸೆಲ್ ಮೇಲೆ ಸೆಸ್ ಹಾಕೋದ್ರಿಂದ ಬಡವರಿಗೆ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಬಜೆಟ್ ಜನ ವಿರೋಧಿ,ಬಡವರ ವಿರೋಧಿ

ಡಿಸಿಎಂ ಡಾ. ಜಿ.ಪರಮೇಶ್ವರ್ ನಿವಾಸದ ಎದುರು ಮಾತನಾಡಿದ ಅವರು, ಯಾವುದೇ ವಿಶೇಷ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಮತ ಹಾಕಿದ್ದರು. ರಾಜ್ಯದ ಜನರ ಋಣ ತೀರಿಸೋಕಾದ್ರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಯೋಜನೆ ನೀಡಬೇಕಿತ್ತು. ಕೇಂದ್ರ ಸರ್ಕಾರದ ಧೋರಣೆ ಸರಿಯಿಲ್ಲ ಎಂದರು. ಸಾಮಾಜಿಕ, ಕೃಷಿ, ಉದ್ಯೋಗ, ನೀರಾವರಿ ವಲಯಕ್ಕೆ ಹೆಚ್ಚು ಹಣ ಕೊಡಬೇಕಿತ್ತು. ಮೋದಿ ಮತ್ತು ನಿರ್ಮಲಾ ಸೀತಾರಾಮನ್ ನಾವು ಏನು ಮಾಡಿದ್ರು ನಡೆಯುತ್ತೆ ಅಂತ ಭಾವಿಸಿದ್ದಾರೆ. ಈ ಬಜೆಟ್ ಜನ ವಿರೋಧಿ ಬಜೆಟ್ ಎಂದು ಹೇಳಿದ್ದಾರೆ.

ಕೇಂದ್ರದ ಬಜೆಟ್​ನಲ್ಲಿ ಏನು ವಿಶೇಷವಿಲ್ಲ

ಈ ಬಗ್ಗೆ ರಾಮನಗರದಲ್ಲಿ ಮಾತಾನಾಡಿದ ಸಚಿವ ಡಿ.ಕೆ.ಶಿವಕುಮಾರ್, ಕೇಂದ್ರದ ಬಜೆಟ್​ನಲ್ಲಿ ಏನು ವಿಶೇಷವಿಲ್ಲ. ನಮ್ಮ ಜನ ಅವರನ್ನ ಒಪ್ಪಿ ಮತ ಕೊಟ್ಟಿದ್ದಾರೆ. ಅದೆಲ್ಲವನ್ನೂ ಗಮನದಲ್ಲಿಟ್ಟುಕೊಳ್ಳಬೇಕಿತ್ತು. ಆದರೆ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವ ಅಂಶ ಬಜೆಟ್​ನಲ್ಲಿ ಇಲ್ಲ. ರಾಜ್ಯಕ್ಕೂ ಕೂಡ ಈ ಬಜೆಟ್​ನಲ್ಲಿ ಯಾವ ಕೊಡುಗೆಯನ್ನು ನೀಡಿಲ್ಲ ಎಂದರು.

For All Latest Updates

ABOUT THE AUTHOR

...view details