ಕರ್ನಾಟಕ

karnataka

By

Published : Sep 13, 2019, 5:27 AM IST

ETV Bharat / state

ಡಿಕೆಶಿ ಇಂದು ನ್ಯಾಯಾಲಯಕ್ಕೆ ಹಾಜರಾಗುವ ಹಿನ್ನಲೆ ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಡಿ.ಕೆ ಶಿವಕುಮಾರ್ ಇಡಿ ಕಸ್ಟಡಿ ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಇಡಿ ಕಸ್ಟಡಿಗೆ ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ರೊಚ್ಚಿಗೇಳುವ ಸಂಭವವಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯಿದೆ. ಈ ಹಿನ್ನಲೆ ಗುರುವಾರ ರಾತ್ರಿಯೇ ಕನಕಪುರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ರಾಮನಗರ :ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ರನ್ನು ನ್ಯಾಯಾಲಯಕ್ಕೆ ಹಾಜರಿಪಡಿಸುವ ಹಿನ್ನಲೆ ಸ್ವಕ್ಷೇತ್ರ ಕನಕಪುರದಲ್ಲಿ ಬಿಗಿ ಪೋಲೀಸ್ ಬಂದೂಬಸ್ತ್ ಕೈಗೊಳ್ಳಲಾಗಿದೆ.

ಡಿ.ಕೆ ಶಿವಕುಮಾರ್ ಇಡಿ ಕಸ್ಟಡಿ ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಇಡಿ ಕಸ್ಟಡಿಗೆ ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ರೊಚ್ಚಿಗೇಳುವ ಸಂಭವವಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯಿದೆ. ಈ ಹಿನ್ನಲೆ ಗುರುವಾರ ರಾತ್ರಿಯೇ ಕನಕಪುರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ಭದ್ರತೆಗೆ ಓರ್ವ ಎಸ್ಪಿ, 5 ಡಿವೈಎಸ್ಪಿ, 10 ಸಿಪಿಐ, 21 ಪಿಎಸ್​ಐ, 50 ಎಎಸ್​ಐ, 400 ಪಿಸಿ, 50 ಮಂದಿ ಹೋಮ್ ಗಾರ್ಡ್, 4 ಡಿಆರ್ ತುಕಡಿ, 4 ಕೆಎಸ್ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಖುದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಕನಕಪುರದಲ್ಲಿ ಮೊಕ್ಕಾಂ ಹೂಡಿದ್ದು, ಭದ್ರತೆಯ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ.

ABOUT THE AUTHOR

...view details