ಶಿವಮೊಗ್ಗ: ನ್ಯಾಯಕ್ಕಾಗಿ ಆಗ್ರಹಿಸಿ ವ್ಯಕ್ತಿಯೊಬ್ಬ ತನ್ನ ಬೈಕ್ಗೆ ತಾನೇ ಬೆಂಕಿ ಹಚ್ಚಿರುವ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. ಅಂಬೇಡ್ಕರ್ ನಗರದ ನಿವಾಸಿ ರಾಜು ಎಂಬಾತ ಬೈಕ್ಗೆ ಬೆಂಕಿ ಇಟ್ಟಿರುವ ಆರೋಪಿ.
ಅಂಬೇಡ್ಕರ್ ನಗರದಲ್ಲಿ ಮಳೆಗಾಲದಲ್ಲಿ ನೀರು ನಿಂತು ಜನರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಅಲ್ಲಿಯ ಜನರನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರ ಆಗುವಂತೆ ಮತ್ತು ಸ್ಥಳಾಂತರವಾದ ಪ್ರದೇಶದ ಹಕ್ಕು ಪತ್ರಗಳನ್ನು ನೀಡುವುದಾಗಿ ಸೂಚಿಸಿತ್ತು. ಅದರಂತೆ ಅಲ್ಲಿಯ ಜನರು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದರು. ಕೆಲವರಿಗೆ ಮಾತ್ರ ಹಕ್ಕು ಪತ್ರಗಳನ್ನು ದೊರೆತಿದ್ದು ಮತ್ತೆ ಕೆಲವರಿಗೆ ಹಕ್ಕಪತ್ರ ನೀಡಿರಲಿಲ್ಲ.