ಕರ್ನಾಟಕ

karnataka

By

Published : Jan 8, 2020, 6:04 PM IST

ETV Bharat / state

ಭಾರತ್ ಬಂದ್: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆ ಸಾವು

ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿರುವ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ.

A policeman on duty has died of a heart attack.
ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಶಿವಮೊಗ್ಗ:ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ರವಿ ಶೇಟ್​​ (38) ಮೃತ ಪೇದೆ.

ಇಂದು ಭಾರತ್ ಬಂದ್ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಕರ್ತವ್ಯದಲ್ಲಿದ್ದಾಗ ರವಿ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು.ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವಾಗ ತೀವ್ರ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾಳೆ. ರವಿ ಶೇಟ್​ ನಿಧನಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

ABOUT THE AUTHOR

...view details