ಶಿವಮೊಗ್ಗ: ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕರೂರು ಹೋಬಳಿಯ ತುಮರಿ ಗ್ರಾಮದ ಬಳಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 18 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಖಾಸಗಿ ವಾಹನ ಸೇರಿದಂತೆ, ಆಂಬ್ಯುಲೆನ್ಸ್ ಮೂಲಕ ಸಾಗರದ ಉಪ ವಿಭಾಗಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.