ಕರ್ನಾಟಕ

karnataka

ETV Bharat / state

ಬಸ್ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿಬಿವಿಪಿ ಪ್ರತಿಭಟನೆ - Latest Protest News In Shivamogga

ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುಲು ಸರಿಯಾದ ಬಸ್​ ಸೌಲಭ್ಯವಿಲ್ಲ ಎಂದು ಆರೋಪಿಸಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

abvp-protest-in-shivamogga
ನಗರದಿಂದ ಹಾಸ್ಟೆಲ್​ ಬಲು ದೂರ, ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ

By

Published : Jan 22, 2020, 5:36 PM IST

ಶಿವಮೊಗ್ಗ: ನಗರದ ಹೊರ ವಲಯದ ಹಾಸ್ಟೆಲ್​ನಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ನಗರದಿಂದ ಹಾಸ್ಟೆಲ್​ ಬಲು ದೂರ, ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು, ಮಲ್ಲಿಗೇನಹಳ್ಳಿ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ಈ ಹಾಸ್ಟೆಲ್ ನಗರದಿಂದ 8 ಕಿ.ಮೀ ದೂರದಲ್ಲಿದೆ‌. ಹಾಸ್ಟೆಲ್ ನಿಂದ ಕಾಲೇಜಿಗೆ ಬರಲು ಸರಿಯಾದ ಸಮಯಕ್ಕೆ ಬಸ್ ಇಲ್ಲ. ಇದರಿಂದ ನಿತ್ಯ ತರಗತಿಯನ್ನು ತಪ್ಪಿಸಿ ಕೊಳ್ಳುವಂತಾಗಿದೆ ಆರೋಪಿಸಿ ಪ್ರತಿಭಟನೆ ನಡೆಸಿದರು.

ಈ ಮೊದಲು ಇದೇ ವಿದ್ಯಾರ್ಥಿಗಳ ಹಾಸ್ಟೆಲ್ ನಗರದ ಮಧ್ಯೆ ಇತ್ತು. ಈಗ ನಗರದಿಂದ ದೂರ ಇರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಮಸ್ಯೆಯಾಗುತ್ತಿದೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ABOUT THE AUTHOR

...view details