ಕರ್ನಾಟಕ

karnataka

ಅ. 21ರಂದು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ: ಸಿಎಂ ಬಿಎಸ್​ವೈ

ಅ. 21ರಂದು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ತಿಳಿಸಿದ್ದಾರೆ.

By

Published : Oct 19, 2020, 1:55 PM IST

Published : Oct 19, 2020, 1:55 PM IST

CM BS Yaduyurappa
ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಅ. 21ರಂದು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಾಳೆ ಬೆಂಗಳೂರಿಗೆ ಹೋಗಿ ಅಲ್ಲಿದ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತೇನೆ. ವೈಮಾನಿಕ ಸಮೀಕ್ಷೆ ನಡೆಸಿದ ನಂತರ ದೆಹಲಿಗೆ ತೆರಳಿ ಪ್ರಧಾನಮಂತ್ರಿಗಳಿಗೆ ಪ್ರವಾಹದ ಪರಿಹಾರ ಕೇಳಲಾಗುವುದು. ಈಗಾಗಲೇ ಪ್ರವಾಹದ ಸ್ಥಳದಲ್ಲಿ ಜನರಿಗೆ ಸರ್ಕಾರ ಸ್ಪಂದಿಸುತ್ತಿದೆ. ಜನರ ನೆರವಿಗೆ ಸರ್ಕಾರ ಸಿದ್ಧವಿದೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸೇರಿದಂತೆ ಇತರರು ಇದ್ದರು.

ABOUT THE AUTHOR

...view details