ಶಿವಮೊಗ್ಗ:ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಮ್ಮೆ ಲಾಕ್ಡೌನ್ ಜಾರಿ ಮಾಡುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಮುಂದಾಗಬೇಕೆಂದು ಎಂದು ಅಖಿಲ ಭಾರತ ಕರುನಾಡ ಯುವಶಕ್ತಿ ಸಂಘಟನೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಜಿಲ್ಲೆಯಲ್ಲಿ ಕೊರೊನಾ ಆತಂಕ ಮೂಡಿಸುತಿದ್ದು ಕೆಲವೇ ದಿನಗಳ ಅಂತರದಲ್ಲಿ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆ ಇದೆ. ಸರ್ಕಾರ ಕೂಡಲೇ ಲಾಕ್ಡೌನ್ ಸಡಿಲಿಕೆಯನ್ನು ಕೈಬಿಟ್ಟು ಪುನಃ ಲಾಕ್ಡೌನ್ ಅನ್ನು ಜಾರಿಗೆ ತರುವ ಮೂಲಕ ಕೊರೊನಾವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.