ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದಲೇ ವಿರೋಧ ಪಕ್ಷದ ನಾಯಕರ ಮೇಲೆ ಐಟಿ ಸೇರಿದಂತೆ ಸಿಬಿಐ ದಾಳಿ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಬಿಐ ನವರಿಗೆ ಕಾಂಗ್ರೆಸ್ನ ಡಿ ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳು ಮಾತ್ರ ಕಾಣುತ್ತದೆಯೇ? ಯಾಕೆ ಬಿಜೆಪಿರವರ ಯಾವುದೇ ಶಿಕ್ಷಣ ಸಂಸ್ಥೆಗಳು ಇರಲ್ಲವೇ ಎಂದು ಪ್ರಶ್ನೆ ಮಾಡಿದರು. ಇದರಿಂದಾಗಿಯೇ ಯಾವ ಚಲನಚಿತ್ರ ನಟರು ಸರ್ಕಾರದ ಅನ್ಯಾಯದ ಬಗ್ಗೆ ಬಾಯಿ ಬಿಡುತ್ತಿಲ್ಲ ಎಂದರು.
ಅಸಹಾಯಕತೆಯಿಂದ ಹಾಲಪ್ಪ ಧರ್ಮಸ್ಥಳಕ್ಕೆ ಹೋಗಿದ್ದಾರೆ:ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರದಿಂದ ಪರಿಹರಿಸಲು ಆಗದೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸಂತ್ರಸ್ತರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದು ಶಾಸಕರ ಸಹಾಯಕತೆಯನ್ನು ತೋರಿಸುತ್ತದೆ. ಇವರದ್ದೇ ಸರ್ಕಾರ ಇದ್ದರೂ ಸಹ ಆಗದೆ ಧರ್ಮಸ್ಥಳದ ಮೊರೆ ಹೋಗಿದ್ದಾರೆ. ಇದು ಕಾಂತಾರ ಚಿತ್ರದ ಎಫೆಕ್ಟ್ ಎಂದು ವ್ಯಂಗ್ಯವಾಡಿದರು. ಇವರು ಸರ್ಕಾರದ ಕಡೆ ಹೋಗದೆ ಧರ್ಮಸ್ಥಳಕ್ಕೆ ಹೋಗಿದ್ದು ನೋಡಿದರೆ, ಇಂತಹ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ಕಿಡಿಕಾರಿದರು.