ಕರ್ನಾಟಕ

karnataka

ರೈತ ವಿರೋಧಿ ಕಾಯ್ದೆ ವಿರುದ್ಧ ಜಿಲ್ಲೆಯಾದ್ಯಂತ ಪ್ರತಿಭಟನೆ.. ರಸ್ತೆ ತಡೆದು ಆಕ್ರೋಶ

By

Published : Sep 25, 2020, 5:30 PM IST

ಪೊಲೀಸರು 20ಕ್ಕೂ ಹೆಚ್ಚು ರೈತರನ್ನು ಬಂಧಿಸಿದರು. ಸಾಗರ ತಾಲೂಕು ರೈತ ಸಂಘ ತಾಳಗುಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿತು..

Anti-Farmer Act Opposition across Shimoga District
ಶಿವಮೊಗ್ಗ ಜಿಲ್ಲಾದ್ಯಂತ ರೈತ ವಿರೋಧಿ ಕಾಯ್ದೆಗೆ ವಿರೋಧ, ರಸ್ತೆ ತಡೆ ನಡೆಸಿ ಪ್ರತಿಭಟನೆ

ಶಿವಮೊಗ್ಗ :ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಇಂದು ಜಿಲ್ಲಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ರೈತ ವಿರೋಧಿ ಕಾಯ್ದೆ ವಿರೋಧಿಸಿ ಜಿಲ್ಲೆಯಾದ್ಯಂತ ರಸ್ತೆ ತಡೆದು ಪ್ರತಿಭಟನೆ

ಶಿವಮೊಗ್ಗದಲ್ಲಿ ರೈತ ಸಂಘದ ಬಸವರಾಜಪ್ಪನವರ ನೇತೃತ್ವದಲ್ಲಿ ಫ್ಲೈ ಓವರ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಹೊಸನಗರದಲ್ಲಿ ರೈತ ಸಂಘದವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.

ಈ ವೇಳೆ ಪೊಲೀಸರು 20ಕ್ಕೂ ಹೆಚ್ಚು ರೈತರನ್ನು ಬಂಧಿಸಿದರು. ಸಾಗರ ತಾಲೂಕು ರೈತ ಸಂಘ ತಾಳಗುಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿತು. ಈ ಸಂಬಂಧ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

ABOUT THE AUTHOR

...view details