ಕರ್ನಾಟಕ

karnataka

ETV Bharat / state

ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ

ಅಪರಿಚಿತರ ಗುಂಪೊಂದು ಯುವಕನೋರ್ವನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

By

Published : Dec 31, 2019, 5:35 PM IST

Attack on a young man by stranger in Bhadravati
ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕ ಮೇಲೆ ಹಲ್ಲೆ

ಶಿವಮೊಗ್ಗ: ನಂಬರ್ ಪ್ಲೇಟ್​ ಇಲ್ಲದ ಪಲ್ಸರ್ ಬೈಕ್​ನಲ್ಲಿ ಬಂದ ಅಪರಿಚಿತರ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ.

ಭದ್ರಾವತಿ ನಗರದ ಭೂತನಗುಡಿಯ ಯುವಕ ಹಡಮ್ ಸಿಂಗ್( 30) ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ಹಾರ್ಡ್‌ವೇರ್ ಶಾಪ್ ಬಂದ್ ಮಾಡಿ ಮನೆಗೆ ತೆರಳುವಾಗ ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಗಾಯಾಳು ಹಡಮ್ ಸಿಂಗ್‌ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ

ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details