ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ: ಮಗು ಸೇರಿ ನಾಲ್ವರಿಗೆ ಗಾಯ

ರಿಪ್ಪನ್​ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವಾ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ವಾಹನಗಳು ಸಂಪೂರ್ಣ ಜಖಂಗೊಂಡಿವೆ.

By

Published : Jun 9, 2019, 8:42 PM IST

ಬೈಕ್​ ಅಪಘಾತ

ಶಿವಮೊಗ್ಗ:ಹೊಸನಗರ ತಾಲೂಕಿನ ರಿಪ್ಪನ್​ಪೇಟೆಯ ಬಾಳೂರು ಗೇರು ಫ್ಯಾಕ್ಟರಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಬೈಕ್​ಗಳು ಸಂಪೂರ್ಣ ಜಖಂಗೊಂಡಿವೆ.

ರಿಪ್ಪನ್​ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವಾ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಎರಡು ಬೈಕ್​ಗಳು ವೇಗವಾಗಿ ಬರುತ್ತಿದ್ದ ಕಾರಣ ಸಮೀಪಕ್ಕೆ ಆಗಮಿಸುತ್ತಿದ್ದಂತೆ ನಿಯಂತ್ರಣ ಮಾಡಲು ಸಾಧ್ಯವಾಗದೆ ಡಿಕ್ಕಿ ಹೊಡೆದಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ರಿಪ್ಪನ್​ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಿಪ್ಪನ್​​ಪೇಟೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details