ಕರ್ನಾಟಕ

karnataka

ETV Bharat / state

ಮಂಜುನಾಥನ ದರ್ಶನ ಪಡೆದು ಬರುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಶಾಕ್​ನಿಂದ ಮೂವರು ಬಲಿ - ಗರ್ತಿಕೆರೆ ಬಳಿ ಕಾರು ಡಿಕ್ಕಿ

ಇಂದು ಮುಂಜಾನೆ ಧರ್ಮಸ್ಥಳದಿಂದ ಬರುತ್ತಿದ್ದ ಕಾರು ಗರ್ತಿಕೆರೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

car accident
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

By

Published : Sep 24, 2020, 3:06 PM IST

ಶಿವಮೊಗ್ಗ:ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಕ್​ನಿಂದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ.

ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಭಟ್ಟರ ಕುಟುಂಬ ಮಂಜುನಾಥನ ದರ್ಶನ ಪಡೆಯಲು ಧರ್ಮಸ್ಥಳಕ್ಕೆ ಹೋಗಿದ್ದರು. ಕಾರಿನಲ್ಲಿ ಆರು ಮಂದಿ ಹೋಗಿದ್ದರು.

ಇಂದು ಬೆಳಗ್ಗೆ ಧರ್ಮಸ್ಥಳದಿಂದ ರಿಪ್ಪನ್ ಪೇಟೆಗೆ ವಾಪಸಾಗುತ್ತಿದ್ದ ವೇಳೆ ಗರ್ತಿಕೆರೆ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details