ಕರ್ನಾಟಕ

karnataka

By

Published : Mar 24, 2021, 10:57 AM IST

Updated : Mar 24, 2021, 12:13 PM IST

ETV Bharat / state

ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಸ್ವಯಂ ಪ್ರೇರಿತ ದೂರು ದಾಖಲು

ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಮೇಲೆ ಸ್ವಯಂ ಪ್ರೇರಿತ ದೂರು ದಾಖಲು
ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಮೇಲೆ ಸ್ವಯಂ ಪ್ರೇರಿತ ದೂರು ದಾಖಲು

ಶಿವಮೊಗ್ಗ: ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ತವರು ಜಿಲ್ಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಕಳೆದ ಶನಿವಾರ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಕಿಸಾನ್​ ಮಹಾ ಪಂಚಾಯತ್​ ಸಮಾವೇಶ ನಡೆದಿತ್ತು. ಅಂದು ರಾಕೇಶ್ ಟಿಕಾಯತ್, ಡಾ.ದರ್ಶನ್ ಪೌಲ್ ಹಾಗೂ ಯುದ್ವೀರ್ ಸಿಂಗ್ ಅವರು ಭಾಗಿಯಾಗಿದ್ದರು. ಈ ವೇಳೆ ರಾಕೇಶ್ ಟಿಕಾಯತ್ ತಮ್ಮ ಭಾಷಣದಲ್ಲಿ ‘ನಾವು ದೆಹಲಿಯಲ್ಲಿ ಹೋರಾಟ ಮಾಡಿದಂತೆ ಕರ್ನಾಟಕದಲ್ಲೂ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕು. ರೈತರೆಲ್ಲರೂ ಟ್ರ್ಯಾಕ್ಟರ್​ನಲ್ಲಿ ವಿಧಾನಸೌಧವನ್ನು ಮುತ್ತಿಗೆ ಹಾಕಬೇಕು’ ಎಂದು ಹೇಳಿದ್ದರು.

ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಅವರು ರಾಕೇಶ್ ಟಿಕಾಯತ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಸ್ವಯಂ ಪ್ರೇರಿತವಾದ ದೂರು‌ ದಾಖಲಿಸಿಕೊಂಡಿದ್ದಾರೆ. ಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಕೊಪ್ಪದ್ ದೂರುದಾರರಾಗಿದ್ದಾರೆ.

ರಾಕೇಶ್ ಟಿಕಾಯತ್ ವಿರುದ್ಧ ದೂರಿನ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಮಹಾ ಪಂಚಾಯತ್ ನವರು ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Last Updated : Mar 24, 2021, 12:13 PM IST

For All Latest Updates

TAGGED:

ABOUT THE AUTHOR

...view details