ಕರ್ನಾಟಕ

karnataka

ETV Bharat / state

ವರ್ಷದೊಳಗೆ ಪೌರ ಕಾರ್ಮಿಕರಿಗೆ 164 ಮನೆ ನಿರ್ಮಾಣ.. ಸಚಿವ ಕೆ ಎಸ್ ಈಶ್ವರಪ್ಪ ಭರವಸೆ - Home for citizens of Siddheshwar city

ಮನೆಗಳನ್ನು ನೀಡುವ ಮೂಲಕ ಇಡೀ ಊರನ್ನು ಸ್ವಚ್ಛಗೊಳಿಸುವಂತಹ ಮಹತ್ವದ ಕಾರ್ಯ ಮಾಡುವ ಪೌರಕಾರ್ಮಿಕರಿಗೆ ಸ್ವಾಭಿಮಾನದಿಂದ ಬದುಕಲು ನೆರವಾದಂತಾಗುತ್ತದೆ. ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧ..

Construction of 164 houses for civilian workers within a year: K. S. Eshwarappa
ವರ್ಷದೊಳಗೆ ಪೌರ ಕಾರ್ಮಿಕರಿಗೆ 164 ಮನೆಗಳ ನಿರ್ಮಾಣ: ಸಚಿವ ಕೆ. ಎಸ್. ಈಶ್ವರಪ್ಪ ಭರವಸೆ

By

Published : Oct 2, 2020, 7:57 PM IST

ಶಿವಮೊಗ್ಗ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದೊಳಗಾಗಿ 164 ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಇಂದು ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6 ಎಕರೆ ಜಮೀನು ಗುರುತಿಸಲಾಗಿದೆ. ತಕ್ಷಣ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಪೌರ ಕಾರ್ಮಿಕರಿಗೆ ಮನೆ ಒದಗಿಸುವ ವಿಶಿಷ್ಟ ಯೋಜನೆ ಇದಾಗಿದೆ. ಇಡೀ ರಾಜ್ಯಕ್ಕೆ ಇದು ಮಾದರಿ ಎಂದು ಹೇಳಿದರು.

ಮನೆಗಳನ್ನು ನೀಡುವ ಮೂಲಕ ಇಡೀ ಊರನ್ನು ಸ್ವಚ್ಛಗೊಳಿಸುವಂತಹ ಮಹತ್ವದ ಕಾರ್ಯ ಮಾಡುವ ಪೌರಕಾರ್ಮಿಕರಿಗೆ ಸ್ವಾಭಿಮಾನದಿಂದ ಬದುಕಲು ನೆರವಾದಂತಾಗುತ್ತದೆ. ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧ ಎಂದರು.

ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‌ಗಳಾದ ಚನ್ನಬಸಪ್ಪ, ಯೋಗೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details