ಶಿವಮೊಗ್ಗ :ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗೆ ಪುನರ್ವಸತಿ ಸೌಲಭ್ಯ ನೀಡಿ ಮುಖ್ಯವಾಹಿನಿಗೆ ತರುವ ಕೆಲಸ ಶೀಘ್ರವೇ ಜಾರಿಗೊಳ್ಳಬೇಕು ಎಂದು ಅನುರಾಧ ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸುತ್ತಿರುವ ಕುರಿತು ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯನ ಬದಲಾಗಿ ಮಿಷನ್ಗಳ ಸಹಾಯದಿಂದಲೇ ಶೌಚಾಲಯ, ತೆರೆದ ಗುಂಡಿಗಳು ಮತ್ತು ಒಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಇದರಿಂದ ದುರ್ಘಟನೆಗಳು ನಡೆಯುವುದನ್ನು ತಡೆಯಬಹುದು ಮತ್ತು ಜಾಡಮಾಲಿಗಳನ್ನು ಈ ವೃತ್ತಿಯಿಂದ ಮುಕ್ತಗೊಳಿಸಬಹುದು.