ಶಿವಮೊಗ್ಗ :ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಕೊಡುವುದಾಗಿ ಸುಳ್ಳು ಹೇಳಿ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ. ಶಿವಮೊಗ್ಗದಲ್ಲಿ ನಾವು ಗೆಲ್ಲಲು ಜನರ ಆಶೀರ್ವಾದಕ್ಕಿಂತಲೂ ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಇಂದು ನಗರದ ಶಿವಪ್ಪನಾಯಕನ ಮಾರುಕಟ್ಟೆ ಬಳಿ ಇರುವ ನೂತನ ಶಾಸಕರ ಕಛೇರಿ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ಲೋಕಸಭಾ ಚುನಾವಣೆಗಳು ಬರುತ್ತವೆ. ಇಂತಹ ಸಂದರ್ಭದಲ್ಲಿ ನಾವು ಯಾವ ಸಾಧನೆ ಮಾಡಿ ಗೆದ್ದಿದ್ದೇವೆ. ಅದೇ ನಿಟ್ಟಿನಲ್ಲಿ ಚುನವಣೆಯಲ್ಲಿ ಗೆಲ್ಲಲು ಪೂರ್ಣ ಪ್ರಮಾಣದಲ್ಲಿ ಶ್ರಮ ಹಾಕಬೇಕು ಎಂದು ಕರೆ ಕೊಟ್ಟರು.
ಕಾಂಗ್ರೆಸ್ನವರು ಇದೀಗ ಅಧಿಕಾರದ ಅಮಲಿನಲ್ಲಿದ್ದಾರೆ. ಈ ಅಮಲನ್ನು ಲೋಕಸಭೆ ಚುನಾವಣೆಯಲ್ಲಿ ಇಳಿಸಬೇಕು. ಇತ್ತೀಚಿನ ದಿನಗಳಿಂದ ಈ ಅಮಲಿನಲ್ಲಿ ಅವರು ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆ ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎನ್ನುತ್ತಿದ್ದರು. ಆದರೆ ತಕ್ಷಣ ಸಿಎಂ ಸಿದ್ದರಾಮಯ್ಯ ಬುದ್ದಿವಂತರಾಗಿ ಆರ್ಎಸ್ಎಸ್ ಬ್ಯಾನ್ ಮಾಡುವ ಯೋಚನೆ ನಮ್ಮ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು ಎಂದು ಕ್ರಾಂಗ್ರೆಸ್ ವಿರುದ್ದ ಕಿಡಿಕಾರಿದರು.
ನಾವು ಚುನಾವಣೆಯಲ್ಲಿ 66 ಸೀಟ್ ತೆಗೆದುಕೊಂಡು ಸೋತಿರಬಹುದು. ಆದರೆ ಓಟ್ ಶೇರಿಂಗ್ನಲ್ಲಿ ನಮ್ಮ ಮತಗಳು ಕಡಿಮೆ ಆಗಿಲ್ಲ. ಕಳೆದ ಬಾರಿ 30% ಮತಗಳನ್ನು ಪಡೆದುಕೊಂಡಿದ್ದು, ಸೋತಿದ್ದರೂ ಕೂಡ 0.6% ಹೆಚ್ಚು ಮತಗಳನ್ನು ಪಡೆದುಕೊಂಡಿದ್ದೇವೆ. ಜನರು ಯಾವುದೇ ಜಾತಿ ಯೋಚಿಸದೇ ಎಲ್ಲ ಜಾತಿ, ಧರ್ಮದವರು ರಾಷ್ಟ್ರೀಯ ವಿಚಾರಧಾರೆ ಹೊಂದಿರುವ ಬಿಜೆಪಿಗೆ ಮತ ನೀಡಿದ್ದಾರೆ. ಈ ದಿಕ್ಕಿನಲ್ಲಿ
ನಾವೆಲ್ಲ ಒಟ್ಟಾಗಿ ಮುಂಬರುವ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.