ಕರ್ನಾಟಕ

karnataka

ರೋಟರಿ ಚಿತಾಗಾರದಲ್ಲಿ ಹರ್ಷ ಅಂತ್ಯಕ್ರಿಯೆ: ಈಶ್ವರಪ್ಪ, ಸಂಸದ ರಾಘವೇಂದ್ರ ಭಾಗಿ

By

Published : Feb 21, 2022, 7:51 PM IST

Updated : Feb 21, 2022, 8:30 PM IST

ನಿನ್ನೆ ಕೊಲೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ರೋಟರಿ ಚಿತಾಗಾರದಲ್ಲಿ ಇಂದು ಮರಾಠ ಸಂಪ್ರದಾಯದಂತೆ ನೆರವೇರಿಸಲಾಯಿತು.

KS Ishwarappa, MP B.Y. Raghavendra are present
ರೋಟರಿ ಚಿತಾಗಾರ’ದಲ್ಲಿ ಭಜರಂಗದಳದ ಕಾರ್ಯಕರ್ತ ‘ಹರ್ಷ ಅಂತ್ಯಕ್ರಿಯೆ

ಶಿವಮೊಗ್ಗ:ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಅಂತ್ಯಕ್ರಿಯೆ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ನಡೆದಿದೆ.

ರೋಟರಿ ಚಿತಾಗಾರದಲ್ಲಿ ಹರ್ಷ ಅಂತ್ಯಕ್ರಿಯೆ

ಹರ್ಷನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ಅಂತಿಮ ವಿಧಿ ವಿಧಾನಗಳು ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.

ಇದನ್ನೂ ಓದಿ:ಹರ್ಷನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ.. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಟಿಯರ್ ಗ್ಯಾಸ್ ಪ್ರಯೋಗ

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಜೈ ಶ್ರೀರಾಮ್, ಹರ್ಷ, ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು.

Last Updated : Feb 21, 2022, 8:30 PM IST

ABOUT THE AUTHOR

...view details