ಕರ್ನಾಟಕ

karnataka

By

Published : Feb 17, 2021, 9:26 PM IST

ETV Bharat / state

ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧ: ಸಿಎಂ ಬಿಎಸ್​ವೈ

ಬಜೆಟ್​​ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಯಾವ ರೀತಿಯ ಯೋಜನೆ ರೂಪಿಸಬೇಕು ಎಂಬುದರ ಕುರಿತು ಚಿಂತನೆ ಮಾಡುತ್ತಿದ್ದೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

government-committed-to-safeguarding-nut-growers-cm-bsy
ಸಿಎಂ ಬಿಎಸ್​ವೈ

ಶಿವಮೊಗ್ಗ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ

ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡುಮಗಟ್ಟದಲ್ಲಿ ಆಯೋಜಿಸಲಾಗಿದ್ದ ಹೊಳಲೂರು ಹಾಗೂ ಆನವೇರಿ ಭಾಗದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಬೆಳೆಗಾರರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅಡಿಕೆಗೆ ಒಳ್ಳೆ ಬೆಲೆ ಸಿಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡುತ್ತೆ ಎಂದರು.

ಓದಿ:ನಾ ಮಂತ್ರಿಯಲ್ಲ, ಗೋ ಸೇವಕ.. ಗೋ ಸಾಗಾಣೆ ತಡೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಸಚಿವ ಪ್ರಭು ಚೌಹಾಣ್

ಬಜೆಟ್​​ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಯಾವ ರೀತಿಯ ಯೋಜನೆ ರೂಪಿಸಬೇಕು ಎಂಬುದರ ಕುರಿತು ಚಿಂತನೆ ಮಾಡುತ್ತಿದ್ದೇನೆ. ಈಗಿರುವ ಯಾವ ಸವಲತ್ತುಗಳನ್ನು ಸಹ ಈ ಬಜೆಟ್​​ನಲ್ಲಿ ಕಡಿಮೆ ಮಾಡದೇ ಎಲ್ಲವನ್ನೂ ಮುಂದುವರೆಸಿಕೊಂಡು ಹೋಗುವ ಭರವಸೆ ನೀಡುತ್ತೇನೆ ಎಂದು ಹೇಳಿದರು.

For All Latest Updates

ABOUT THE AUTHOR

...view details