ಕರ್ನಾಟಕ

karnataka

ETV Bharat / state

ಡಿ.ಕೆ.ಶಿ‌ವಕುಮಾರ್ ಸರಿ ಇದ್ರೆ ಇಡಿಗೆ ಯಾಕೆ ಭಯಪಡಬೇಕು?: ಆರಗ ಜ್ಞಾನೇಂದ್ರ - ಕುಮಾರಸ್ವಾಮಿ ವಿರುದ್ದ ಹರಿಹಾಯ್ದ ಗೃಹ ಸಚಿವರು

ಎಸಿಬಿ ದುರುಪಯೋಗ, ಲೋಕಾಯುಕ್ತದ ಕತ್ತು ಹಿಸುಕಿದವರು ಕಾಂಗ್ರೆಸ್‌ನವರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.

Home Minister Araga Gyanendra spoke to reporters.
ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಕರ್ತರೊಂದಿಗೆ ಮಾತನಾಡಿದರು.

By

Published : Feb 8, 2023, 10:48 PM IST

Updated : Feb 8, 2023, 10:56 PM IST

ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಇಡಿಗೆ ಸರಿಯಾದ ಮಾಹಿತಿ ನೀಡಿದರೆ ಡಿ.ಕೆ.ಶಿವಕುಮಾರ್ ಯಾಕೆ ಹೆದರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ‌. ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯಲ್ಲಿ ಡಿಕೆಶಿ, ಇಡಿ ನಮಗೆ ಸುಮ್ಮನೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂದಿದ್ದರು. ಈ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವರು ಪ್ರತಿಕ್ರಿಯಿಸಿದ್ದಾರೆ.

ಅವರು ಎಸಿಬಿಯನ್ನು ದುರುಪಯೋಗ ಪಡಿಸಿಕೊಂಡಿದ್ದರು. ಲೋಕಾಯುಕ್ತದ ಕುತ್ತಿಗೆ ಹಿಸುಕುವ ಕೆಲಸ ಮಾಡಿದ್ದರು. ಇಡಿಗೆ ಸೂಕ್ತ ಸಮಜಾಯಿಷಿ ನೀಡಲಿ. ಅದನ್ನು ಬಿಟ್ಟು ಯಾಕೆ ಭಯಪಡಬೇಕು? ಇವರು ಉತ್ತರ ಕೊಡದಿದ್ದರೆ ಕೇಸ್ ಮುಗಿಯುತ್ತಾ? ಎಂದು ಕೇಳಿದರು.

ಕುಮಾರಸ್ವಾಮಿ ಈಗ ರಾಜ್ಯಾದ್ಯಂತ ಸುತ್ತಾಡಿಕೊಂಡು ಬಂದಿದ್ದಾರೆ. ಇದರಿಂದ ಅವರ ಸ್ಥಾನ ಏನು ಎನ್ನುವುದು ಗೊತ್ತಾಗಿರಬೇಕು. ಆದ್ದರಿಂದ ಈ ರೀತಿ ಜಾತಿ, ಧರ್ಮಗಳ ನಡುವೆ ತಂದಿಡುವ ಕೆಲಸ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ತಮ್ಮ ಹೇಳಿಕೆಗೆ ಅವರು ಕ್ಷಮೆ ಯಾಚಿಸಬೇಕು. ಬಿಜೆಪಿ ಜಾತಿ ಮೀರಿದ ಪಕ್ಷ. ನಮ್ಮದು ಕನ್ನಡಿಗರ, ಭಾರತೀಯರ ಪಕ್ಷ ಎಂದರು.

ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಇದೇ ರೀತಿ ಲಿಂಗಾಯತ-ವೀರಶೈವರ ನಡುವೆ ತಂದಿಡುವ ಕೆಲಸ ಮಾಡಿಸಿ, ಎಲ್ಲರನ್ನೂ ಉಯಿಲೆಬ್ಬಿಸುವ ಕೆಲಸ ಮಾಡಿದ್ದರು. ಇವರೆಲ್ಲ ಕೈಲಾಗದಿದ್ದವರು. ಸರಿಯಾದ ಅಡಳಿತ ಮಾಡದವರು. ಕಾಂಗ್ರೆಸ್‌ನವರ ಅಡಳಿತ ಇದ್ದಾಗ ಸರಿಯಾಗಿ ಕೆಲಸ ಮಾಡಿರಲಿಲ್ಲ. ಈಗ ಹತಾಶರಾಗಿ ಮಾತಾಡ್ತಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅರ್ಥವೇ ಇಲ್ಲದ ರೀತಿಯಲ್ಲಿ ಮಾತುಗಳನ್ನಾಡುತ್ತಿದ್ದಾರೆ. ಅವರು ಅಲ್ಪಸಂಖ್ಯಾತರಲ್ಲಿ ಕೈಯೊಡ್ಡುವ ಕೆಲಸ ಮಾಡ್ತಿದ್ದಾರೆ. ಈ ರೀತಿ ಮಾತನಾಡಿದ್ರೆ ಅಲ್ಪಸಂಖ್ಯಾತರ ಓಟ್ ಸಿಗುತ್ತೆ ಅಂದ್ಕೊಂಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಕಳೆದುಕೊಳ್ಳುವುದೇ ಜಾಸ್ತಿ ಎಂದರು.

ಇದನ್ನೂಓದಿ:'ನಾಳೇನಾಗುತ್ತೆ ಅಂತಾ ಭಗವಂತನಿಗಿಂತಲೂ ಮೊದಲೇ ಕುಮಾರಸ್ವಾಮಿಗೆ ಗೊತ್ತಾಗುತ್ತೆ': ಸಿ.ಸಿ.ಪಾಟೀಲ್ ವ್ಯಂಗ್ಯ

Last Updated : Feb 8, 2023, 10:56 PM IST

ABOUT THE AUTHOR

...view details