ಕರ್ನಾಟಕ

karnataka

ETV Bharat / state

ಪ್ರಧಾನಿ ಮೋದಿ ಭೇಟಿ: ಅಧಿಕಾರಿಗಳಿಂದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ - ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಹೊಳಲೂರು ಗ್ರಾಮದ ಸ್ವಚ್ಛ ಸಂಕೀರ್ಣ ಘಟಕ, ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ, ಸ್ವ ಸಹಾಯ ಸಂಘಗಳ ವಾಣಿಜ್ಯ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Inspection in Holaluru village by the authorities
ಅಧಿಕಾರಿಗಳಿಂದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ

By

Published : Mar 8, 2022, 9:55 PM IST

ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿತು.

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಈ ವೇಳೆ ಕಂಡುಬಂದರು.


ಹೊಳಲೂರು ಗ್ರಾಮದ ಸ್ವಚ್ಛ ಸಂಕೀರ್ಣ ಘಟಕ, ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ, ಸ್ವ ಸಹಾಯ ಸಂಘಗಳ ವಾಣಿಜ್ಯ ಮಳಿಗೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:'ಪಕ್ಷವನ್ನು ನೀವು ನಿಮ್ಮ ಹಿಡಿತಕ್ಕೆ ತೆಗೆದುಕೊಳ್ಳಿ': ಸಿದ್ದರಾಮಯ್ಯಗೆ ಯತ್ನಾಳ್ ಸಲಹೆ

ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ABOUT THE AUTHOR

...view details