ಕರ್ನಾಟಕ

karnataka

By

Published : May 29, 2022, 9:03 PM IST

ETV Bharat / state

ನಪುಂಸಕ ಸಂಘಟನೆಯ ನಾಯಕ ಸಿದ್ದರಾಮಯ್ಯ: ಈಶ್ವರಪ್ಪ ಕಿಡಿ

ಸಿಂಹದಮರಿ ನರೇಂದ್ರ‌ ಮೋದಿ ಅವರು ಪ್ರಧಾನಿಯಾದ ನಂತರ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಿದ್ದಾರೆ ಎಂದು ಮಾಜಿ ಸಚಿವ ಕೆ‌. ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಕೆ‌. ಎಸ್ ಈಶ್ವರಪ್ಪ
ಕೆ‌. ಎಸ್ ಈಶ್ವರಪ್ಪ

ಶಿವಮೊಗ್ಗ:ನಪುಂಸಕ ಸಂಘಟನೆಯ ನಾಯಕ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಕೆ‌. ಎಸ್ ಈಶ್ವರಪ್ಪ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಎಂಬುದನ್ನು ಮರೆತು ಸಿದ್ದರಾಮಯ್ಯ ಅವರು ಆರ್​ಎಸ್‌ಎಸ್‌ ಅನ್ನು ನಪುಂಸಕ ಸಂಘ ಎಂದು ಕರೆದಿದ್ದಾರೆ. ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು. ಅದಕ್ಕಾಗಿ ಕಾಂಗ್ರೆಸ್ ನಪುಂಸಕವಾಗಿದೆ. ಆರ್ ಎಸ್ ಎಸ್ ಹುಲಿ ಸಿಂಹಗಳಂತ ದೇಶ ಭಕ್ತರನ್ನು ತಯಾರಿಸುವ ಸಂಘಟನೆ ಎಂದರು.

ಮಾಜಿ ಸಚಿವ ಕೆ‌. ಎಸ್ ಈಶ್ವರಪ್ಪ ಅವರು ಮಾತನಾಡಿದರು

ಸಿದ್ದರಾಮಯ್ಯ ಅವರು ನನಗೆ ಮೆದುಳು- ನಾಲಿಗೆಗೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಕರೆದಾಗ ನನ್ನನ್ನು ಪ್ರಾಣಿ ಎನ್ನುತ್ತಾರೆ. ಸಿದ್ದರಾಮಯ್ಯ ಅವರು‌ ಮೋದಿ, ಯಡಿಯೂರಪ್ಪ ಅವರನ್ನು ಏಕ ವಚನದಲ್ಲಿ ಬೈದಿದ್ದರು‌. ಈಗ ಹೇಳಲಿ ಸಿದ್ದರಾಮಯ್ಯ ಅವರು ಯಾವಾಗ ಪ್ರಾಣಿಯಾದರು ಎಂದು. ಸಿಂಹದಮರಿ ನರೇಂದ್ರ‌ ಮೋದಿ ಅವರು ಪ್ರಧಾನಿಯಾದ ನಂತರ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಿದ್ದಾರೆ. ನಪುಂಸಕರಾದ ಕಾಂಗ್ರೆಸ್ಸಿಗರು 75 ವರ್ಷ ಅಧಿಕಾರ‌ ನಡೆಸಿದರೂ ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಲಿಲ್ಲ. ಸಿದ್ದರಾಮಯ್ಯ ಅವರನ್ನು ಪ್ರಾಣಿಗೆ ಹೋಲಿಸಿದರೆ ಆ ಪ್ರಾಣಿಗೆ ಅವಮಾನ ಮಾಡಿದಂತೆ. 1925 ರ ವಿಜಯದಶಮಿ ದಿನ ಆರ್ ಎಸ್ ಎಸ್ ಹುಟ್ಟಿದ್ದು. ದೇಶದೊಳಗೆ ಬ್ರಿಟಿಷರು ಆರು ನೂರು ವರ್ಷದ ಹಿಂದೆ ಬರಲು ಆರ್ ಎಸ್ ಎಸ್ ಕಾರಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನು‌ ನೋಡಿದರೆ ಸಿದ್ದರಾಮಯ್ಯ ಅವರ ತಲೆಯಲ್ಲಿ‌ ಸಗಣಿ ಬಿಟ್ಟರೆ ಏನೂ ಇಲ್ಲ ಎಂಬುದು ತಿಳಿಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಆರ್ ಎಸ್ ಎಸ್ ಸಿಂಹ, ಹುಲಿ ಮರಿಗಳಿರುವ ಸಂಘಟನೆ. ಈಗ ಆರ್​ಎಸ್​ಎಸ್​ ನವರು ತಡೆದುಕೊಳ್ಳುವ ಸ್ಥಿತಿಯಲಿಲ್ಲ. ನಾವಾಗಿ ಯಾರನ್ನೂ ಹೊಡೆಯಲು ಹೋಗುವುದಿಲ್ಲ. ಯಾರಾದರೂ ನಮಗೆ ಹೊಡೆದರೆ ಅವರು ಯಾವುದರಲ್ಲಿ ಹೊಡೆದರೋ ಅದರಲ್ಲೇ ತಿರುಗಿಸಿ ಹೊಡೆಯುತ್ತೇವೆ. ಸಿದ್ದರಾಮಯ್ಯ ಅವರು ಕೋರ್ಟ್ ತೀರ್ಪನ್ನು ಸ್ವಾಗತಿಸಬೇಕಿತ್ತು. ಆದರೆ ಅವರು ದೇಶದ್ರೋಹಿ ಓವೈಸಿ ಜೊತೆ ಕೈ ಜೋಡಿಸಿದ್ದಾರೆ. ಖರ್ಗೆ ಮತ್ತು ಸಿದ್ದರಾಮಯ್ಯ ಯಾವ ಪ್ರಾಣಿ ಹಾಗೂ ಯಾವ ಸಂತತಿ ಎಂದು ನೀವೇ ಹೇಳಿ ಎಂದರು.

ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಏಕವಚನದಲ್ಲಿ‌ ನಿಂದಿಸುತ್ತಾರೆ. ಖರ್ಗೆ ಅವರು ಹೆಡ್ಗೆವಾರ್ ಅವರನ್ನು‌ ಏಕ ವಚನದಲ್ಲಿ ನಿಂದಿಸುತ್ತಾರೆ. ಇವರು ಯಾವ ಪ್ರಾಣಿ ಎಂದು ಸ್ಪಷ್ಟಪಡಿಸಲಿ. ಕಾಂಗ್ರೆಸ್‌ ವಿದೇಶಿ ವ್ಯಕ್ತಿಗಳ ಕೈಯಲ್ಲಿ ಸಿಲುಕಿಕೊಂಡಿದೆ. ಸೋನಿಯಾ ಗಾಂಧಿ ಭಾರತೀಯರಾ? ಎಂಬುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಲಿ ಎಂದು ಈಶ್ವರಪ್ಪ ಒತ್ತಾಯಿಸಿದರು.

ಇಂದಿರಾಗಾಂಧಿ ಪತಿ ಫಿರೋಜ್ ಗಾಂಧಿ ಸ್ವಾತಂತ್ರ್ಯ ಹೋರಾಟಗಾರರ. ಫಿರೋಜ್ ಗಾಂಧಿ ಭಾರತೀಯರಾ? ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು. ಹೆಡ್ಗೆವಾರ್​ ಅವರನ್ನು ಯಾವನ್ರೀ ಅವನು ಎಂದು ಕರೆದಿದ್ದು ಇಡೀ‌ ದೇಶದ‌ ಜನರಿಗೆ ನೋವಾಗಿದೆ. ಖರ್ಗೆ ಅವರು ಕೂಡಲೇ ತಮ್ಮ ಹೇಳಿಕೆಗೆ ಕ್ಷಮೆ ಕೇಳಿ ದೊಡ್ಡವರಾಗಬೇಕು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ರಾಷ್ಟ್ರಧ್ವಜ ಬಳಸಿಕೊಳ್ಳುತ್ತಿದ್ದಾರೆ ಕಾಂಗ್ರೆಸ್ಸಿಗರು ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಹೇಳುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ದೇಶದ್ರೋಹಿ. ಭಗವಾದ್ವಜಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಅದು ತ್ಯಾಗದ ಸಂಕೇತ. ಭಗವಾದ್ವಜ ಇನ್ಯಾವುದೋ ಸಮಯದಲ್ಲಿ ರಾಷ್ಟ್ರಧ್ವಜವಾಗಬಹುದು. ತ್ರಿವರ್ಣ ಧ್ವಜ ನಮ್ಮ ಸಂವಿಧಾತ್ಮಕ ಧ್ವಜ. ಅದಕ್ಕೆ ಗೌರವ ಕೊಡಲೇಬೇಕು. ಆರ್ ಎಸ್ ಎಸ್ ನಮ್ಮ ತಾಯಿ. ನಮ್ಮ ತಾಯಿಗೆ ಬೈದರೆ ಸಿಟ್ಟು ಬರುವುದು ಸಹಜ ಎಂದರು.

ಇಂದಿರಾಗಾಂಧಿ, ನೆಹರೂನೇ ಆರ್​ಎಸ್​ಎಸ್ ಅನ್ನು ಏನು ಮಾಡಲು ಆಗಿಲ್ಲ. ಇನ್ನು ಜುಜುಬಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಂದ‌ ಏನು ಮಾಡಲು ಆಗುತ್ತೆ ಎಂದು ಹರಿಹಾಯ್ದರು. ಸಿದ್ದರಾಮಯ್ಯ ಮೈಯಲ್ಲಿ ಅಹಲ್ಯಬಾಯಿ ಹೋಳ್ಕರ್‌ ರಕ್ತ ಹರಿಯುತ್ತಿದೆಯೋ ಅಥವಾ ಔರಂಗಜೇಬ್ ರಕ್ತ ಹರಿಯುತ್ತದೆಯೋ ಸ್ಪಷ್ಟಪಡಿಸಲಿ.

ಅಧಿಕಾರದಾಹಿ ಸಿದ್ದರಾಮಯ್ಯ, ಅದಕ್ಕಾಗಿ ಇದೀಗ ಓವೈಸಿ ಜೊತೆ ಸೇರಿದ್ದಾರೆ. ದೇಶಭಕ್ತ‌ ಮುಸಲ್ಮಾನರು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರೊಂದಿಗೆ ಸೇರಬಾರದು. ದೇಶದಲ್ಲಿ ಎಲ್ಲೆಡೆಯೂ ಮಸೀದಿಗಳಲ್ಲಿ ಐತಿಹಾಸಿಕ ದೇವಾಲಯಗಳು ಪತ್ತೆಯಾಗುತ್ತಿವೆ. ಹೀಗಾಗಿ ಈ ವಿಷಯವನ್ನು ಡೈವರ್ಟ್ ಮಾಡಲು ಆರ್ಯ, ದ್ರಾವಿಡ, ನಪುಂಸಕತ್ವ ಎಂಬ ವಿಷಯದ ಬಗ್ಗೆ ಚರ್ಚೆ ತಿರುಗಿಸುವ ಯತ್ನ‌ವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಕುವೆಂಪು ಅವರ ನಾಡಗೀತೆ ಬಗ್ಗೆ ಯಾರೂ ಅಪಮಾನ ಮಾಡಬಾರದು. ಯಾರಾದರೂ ಅಪಮಾನ‌ ಮಾಡಿದರೆ ಅವರ ವಿರುದ್ಧ‌‌ ಸಿಎಂ ಕ್ರಮ ಕೈಗೊಳ್ಳುತ್ತಾರೆ ಎಂದು ಈಶ್ವರಪ್ಪ ಹೇಳಿದರು.

ಓದಿ:ವಿವಾದಿತ ವೀರಸೌಧಕ್ಕೆ ಭದ್ರತೆ: ಬೆಂಗಳೂರಿನಿಂದ ವಿದುರಾಶ್ವತ್ಥಕ್ಕೆ ಬಜರಂಗದಳ ಬೈಕ್ ಱಲಿ

For All Latest Updates

TAGGED:

ABOUT THE AUTHOR

...view details