ಶಿವಮೊಗ್ಗ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಿಎಎ, ಎನ್ಪಿಆರ್, ಎನ್ಆರ್ಸಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದಲಿತರು, ಮುಸ್ಲಿಮರನ್ನು ತಿವಿಯುವ ಕೆಲಸವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡುತ್ತಿದೆ. ಇದೊಂದು ಸಂವಿಧಾನ ವಿರೋಧಿ ಕಾಯ್ದೆ ಆಗಿದ್ದು, ಇದನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಸಂವಿಧಾನವನ್ನೇ ತಮಗೆ ಇಷ್ಟ ಬಂದ ಹಾಗೆ ತಿದ್ದುಪಡಿ ಮಾಡುತ್ತಾ ಪ್ರಜಾಪ್ರಭುತ್ವವನ್ನು ನಾಶ ಮಾಡಲಾಗುತ್ತಿದೆ. ಈ ಮೂಲಕ ಮತ್ತೆ ಮನು ಧರ್ಮ ಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿ ಕ್ರೂರತನ ಮೆರೆಯಲು ಮನುವಾದಿಗಳು ಮುಂದಾಗಿದ್ದಾರೆ ಎಂದು ದೂರಿದರು.