ಕರ್ನಾಟಕ

karnataka

By

Published : Aug 25, 2020, 4:22 PM IST

ETV Bharat / state

‘ಡಿಕೆಶಿ ಫೋನ್ ಟ್ಯಾಪ್ ಮಾಡಿ ದೇಶ ಉದ್ಧಾರ ಮಾಡ್ಬೇಕಾ’: ಕೆಎಸ್​​​ ಈಶ್ವರಪ್ಪ ವ್ಯಂಗ್ಯ

ನನ್ನ ಫೋನ್ ಕದ್ದಾಲಿಕೆಯಾಗುತ್ತಿದೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇದೋಂದು ಪ್ರಚಾರದ ತಂತ್ರ ಅವರ ಫೋನ್ ಟ್ಯಾಪ್​ ಮಾಡಿ ದೇಶ ಉದ್ಧಾರ ಮಾಡ್ಬೇಕಾ ಅಂತ ವ್ಯಂಗ್ಯವಾಡಿದ್ದಾರೆ.

KS Eshwarappa on dks phone tapping
‘ಡಿಕೆಶಿ ಫೋನ್ ಟ್ಯಾಪ್ ಮಾಡಿ ದೇಶ ಉದ್ಧಾರ ಮಾಡ್ಬೇಕಾ’: ಕೆಎಸ್​​​ ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ:ಸರ್ಕಾರದಿಂದ ಫೋನ್​​ ಕದ್ದಾಲಿಕೆಯಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಫೋನ್ ಟ್ಯಾಪ್ ಮಾಡಿ, ಏನ್ ದೇಶದ ಉದ್ಧಾರ ಮಾಡ್ಬೇಕಾ ನನಗೇನು ಅರ್ಥ ಆಗುತ್ತಿಲ್ಲ, ಅವರೇನು ಮಾಡುತ್ತಿದ್ದಾರೆ ಎಂದು ಅವರ ಫೋನ್​ ಟ್ಯಾಪ್ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಇದೊಂದು ಪ್ರಚಾರದ ಒಂದು ತಂತ್ರ. ಈ ಮೂಲಕ ನಾನು ಡೊಡ್ಡವನಾಗುತ್ತೇನೆ ಎಂದುಕೊಂಡಿದ್ದಾರೆ. ಇದು ಅರ್ಥವಿಲ್ಲದ ಆರೋಪ ಎಂದು ತಿರುಗೇಟು ನೀಡಿದರು.

ABOUT THE AUTHOR

...view details