ಶಿವಮೊಗ್ಗ:ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕಂಟಕವನ್ನುಂಟು ಮಾಡುತ್ತಿದೆ ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಸ್ವಗ್ರಾಮ ಸೊರಬದ ಕುಬಟೂರಿನಲ್ಲಿ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಸರ್ಕಾರ ಮಸೂದೆಗೆ ರಾಜ್ಯಪಾಲರಿಂದ ಅಂಕಿತ ಪಡೆದಿದೆ. ಇದನ್ನು ಬಲವಾಗಿ ವಿರೋಧಿಸುವುದಾಗಿ ಅವರು ಹೇಳಿದರು.
ಯೋಜನೆಗಳು ಬಂಗಾರಪ್ಪ ಕೊಡುಗೆ:
ಮೂಡಿ ಮತ್ತು ಮೂಗೂರು ಏತ ನೀರಾವರಿ ಯೋಜನೆಗಳಿಗೆ ಎಸ್. ಬಂಗಾರಪ್ಪನವರ ಅವಧಿಯಲ್ಲಿಯೇ ರೂಪುರೇಷೆಗಳನ್ನು ತಯಾರಿಸಲಾಗಿದೆ. ಅಂದೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಗಿತ್ತು. ತಾವು ಶಾಸಕರಾದ ಅವಧಿಯಲ್ಲಿ ಮತ್ತು ಶಾಸಕರಾಗಿರದ ಸಂದರ್ಭದಲ್ಲಿಯೂ ತಂದೆಯವರ ಕನಸಿನ ಕೂಸಾದ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಯತ್ನ ಪಟ್ಟಿದ್ದೇನೆ. ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಬಜೆಟ್ನಲ್ಲಿ ಅನುದಾನ ಮೀಸಲಿಟಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದಿನ ಸರ್ಕಾರದಲ್ಲಿ ಮೀಸಲಿಟ್ಟ ಅನುದಾನವನ್ನು ಬಜೆಟ್ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ಕ್ಷೇತ್ರದ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಸಹೋದರನ ವಿರುದ್ಧ ವಾಗ್ದಾಳಿ ನಡೆಸಿದರು.