ಶಿವಮೊಗ್ಗ :ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೊಳಿನ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗುವ ಸುಮಾರು 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ಜಿಲ್ಲೆಯ ಸಾಗರ ರಸ್ತೆಯಲ್ಲಿರುವ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಪ್ರಾಧಿಕಾರದಿಂದ ಕೈಗೊಳ್ಳುವ ಕಾಮಗಾರಿಗಳು ಹಾಗೂ ಸಮಸ್ಯೆಯ ಪರಿಹಾರಗಳ ಕುರಿತು ಚರ್ಚಿಸಲಾಯಿತು. ಪ್ರಸ್ತುತ ಸಂದರ್ಭದಲ್ಲಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ವಿಧಾನ ಪರಿಷತ್ ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ತಲಾ ರೂ.1.00 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಅನುದಾನ ಮಂಜೂರಾಗಿದೆ ಎಂದರು.
ಸರ್ಕಾರಕ್ಕೆ ಸಲ್ಲಿಸಲಾಗಿದ್ದ 70.00 ಕೋಟಿ ರೂಗಳ ಪ್ರಸ್ತಾವನೆಯ ಪೈಕಿ ಕಳೆದ ಬಜೆಟ್ನಲ್ಲಿ 27.42 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಈ ಹಿಂದೆ ಬಳಕೆಯಾಗದೆ ಉಳಿದ 23 ಕೋಟಿ ರೂಗಳ ಅನುದಾನಕ್ಕೆ 300 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈ ವೇಳೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ 13 ಜಿಲ್ಲೆಗಳು ವಿಶಾಲ ಭೂ ಪ್ರದೇಶ ಹೊಂದಿದ್ದು, ಜಿಲ್ಲಾ ಪಂಚಾಯಿತಿಗಳಿಗೆ ಬಿಡುಗಡೆಯಾಗುವ ಅನುದಾನವೂ ಕಡಿಮೆಯಾಗಿದೆ. ಆದ್ದರಿಂದ ಪ್ರಾಧಿಕಾರದ ವತಿಯಿಂದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೂ ಅನುದಾನ ಬಿಡುಗಡೆಗೊಳಿಸಬೇಕೆಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಒತ್ತಾಯಿಸಿದರು.