ಶಿವಮೊಗ್ಗ: ದೇಶದಲ್ಲಿ ಕೊರೊನಾ ಹಾಗೂ ಪ್ರವಾಹ ಎದುರಾಗಿದೆ. ಈ ಎರಡೂ ವಿಪತ್ತುಗಳನ್ನು ಎದುರಿಸುವ ಶಕ್ತಿಯನ್ನು ದೇಶದ ಜನತೆಗೆ ಶ್ರೀಕೃಷ್ಣ ನೀಡಲೆಂದು ಬೇಡಿಕೊಳ್ಳುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜನರ ಮಧ್ಯೆ, ಜಾತಿ-ಜಾತಿಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಧರ್ಮ, ಜಾತಿಯವರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಹಿಂದೂ ಧರ್ಮದ ಶ್ರೇಷ್ಠ ನಾಯಕ ಶ್ರೀಕೃಷ್ಣ. ಆತನ ತತ್ವ ಸಿದ್ಧಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸೋಣ ಎಂದರು.