ಕರ್ನಾಟಕ

karnataka

By

Published : Oct 22, 2019, 8:32 PM IST

ETV Bharat / state

ಮಳೆ ಹಾನಿ ಪ್ರದೇಶಗಳಿಗೆ ಸಂಸದ ರಾಘವೇಂದ್ರ ಭೇಟಿ: ಸೂಕ್ತ ಪರಿಹಾರಕ್ಕೆ ಸೂಚನೆ

ಮಳೆಯಿಂದ ಹಾನಿಗೊಳಗಾದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ, ಬಳ್ಳಿಗಾವಿ, ಬಸವನಂದಿಹಳ್ಳಿ, ಹಿರೇಜಂಬೂರು ಗ್ರಾಮಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿ.ವೈ ರಾಘವೇಂದ್ರ

ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಗ್ರಾಮಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ, ಬಳ್ಳಿಗಾವಿ, ಬಸವನಂದಿಹಳ್ಳಿ, ಹಿರೇಜಂಬೂರು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಳೆಯಿಂದ ಕೆರೆ ಕೋಡಿ ಒಡೆಯುವ ಸ್ಥಿತಿಯಲ್ಲಿರುವ ಕಡೆ ವಿಶೇಷ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯಿಂದ ಹಾನಿಗೊಳದ ಕೆರೆ ಮತ್ತು ರಸ್ತೆಗಳ ದುರಸ್ತಿಗಳನ್ನು ಬೇಗನೇ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ತಹಶೀಲ್ದಾರ್ ಕವಿರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details