ಕರ್ನಾಟಕ

karnataka

ETV Bharat / state

ಶಿವಮೊಗ್ಗ : ಮೊಬೈಲ್​ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ - ಮೊಬೈಲ್​ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ

ಶಿವಮೊಗ್ಗದ ರಿಪ್ಪನಪೇಟೆಯಲ್ಲಿ ಮುಸ್ಲಿಂ ಯುವಕನೋರ್ವ ತನ್ನ ಮೊಬೈಲ್​ ಶಾಪ್​ನಲ್ಲಿ ಲಕ್ಷ್ಮೀ ಪೂಜೆ ಮಾಡಿಸಿದ್ದಾರೆ. ಜೊತೆಗೆ ಮುಸ್ಲಿಂ ಸಂಪ್ರದಾಯದಂತೆ ಪ್ರಾರ್ಥನೆ ಮಾಡಿಸಿದ್ದಾರೆ.

muslim-youth-did-lakshmi-pooja-at-his-mobile-shop-in-shivamogga
ಶಿವಮೊಗ್ಗ : ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿದ ಮುಸ್ಲಿಂ ಯುವಕ

By ETV Bharat Karnataka Team

Published : Nov 14, 2023, 7:43 AM IST

ಶಿವಮೊಗ್ಗ : ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿದ ಮುಸ್ಲಿಂ ಯುವಕ

ಶಿವಮೊಗ್ಗ: ರಾಜ್ಯಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ದೀಪ ಬೆಳಗಿಸಿ ಪಟಾಕಿ ಸಿಡಿಸಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸೋಮವಾರ ರಾಜ್ಯದ ವಿವಿಧೆಡೆ ಅಂಗಡಿ ಪೂಜೆಯನ್ನು ನಡೆಸಲಾಗಿದೆ. ಹಾಗೆಯೇ ಹೊಸನಗರ ತಾಲೂಕಿನ ರಿಪ್ಪನಪೇಟೆ ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವ ತನ್ನ‌ ಮೊಬೈಲ್​ ಅಂಗಡಿಯಲ್ಲಿ ಹಿಂದು ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನಡೆಸಿ, ನಂತರ ಮುಸ್ಲಿಂ ಸಂಪ್ರದಾಯದಂತೆ ಪ್ರಾರ್ಥನೆ ಮಾಡಿದ್ದಾರೆ. ಈ ಮೂಲಕ ಬೆಳಕಿನ ಹಬ್ಬದಂದು ಸೌಹಾರ್ದತೆ ಸಾರಿದ್ದಾರೆ.

ಅರಸಾಳು ಗ್ರಾಮದ ತನ್ವೀರ್ ಅವರು ರಿಪ್ಪನಪೇಟೆಯ ವಿನಾಯಕ ವೃತ್ತದಲ್ಲಿರುವ ಜೊಹರಾ ಕಾಂಪ್ಲೆಕ್ಸ್​ನಲ್ಲಿ "ತನ್ವಿ ಮೊಬೈಲ್ ವರ್ಡ್" ಎಂಬ ಅಂಗಡಿ ನಡೆಸುತ್ತಿದ್ದಾರೆ. ಪ್ರತಿ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನಡೆಸುತ್ತಾರೆ. ಈ ವೇಳೆ ಕಳಸ ಇರಿಸಿ, ಹಣ್ಣುಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಿಂದ ಪೂಜೆ ನೆರವೇರಿಸುತ್ತ ಬಂದಿದ್ದಾರೆ. ಜೊತೆಗೆ ಮುಸ್ಲಿಂ ಧರ್ಮಗುರುಗಳಿಂದ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಹಲವಾರು ವರ್ಷಗಳಿಂದ ಭಾವೈಕ್ಯತೆ ಸಾರುತ್ತಿದ್ದಾರೆ.

ಈ ಬಗ್ಗೆ ಈಟಿವಿ ಭಾರತ್ ಜೊತೆ ಮಾತನಾಡಿದ ಅಂಗಡಿ ಮಾಲೀಕ ತನ್ವೀರ್, ನಾನು ಜಾತ್ಯತೀತಕ್ಕೆ ಬೆಂಬಲ ನೀಡುವವನು. ನಾನು ಮಂದಿರ,‌ ಮಸೀದಿ ಹಾಗೂ ಚರ್ಚ್​ಗಳಿಗೆ ಹೋಗುತ್ತೇನೆ. ನಾನು ನನ್ನ ಧರ್ಮ ಸೇರಿದಂತೆ ಎಲ್ಲಾ ಧರ್ಮವನ್ನು ಪ್ರೀತಿಸುತ್ತೇನೆ. ನಾನು ಅಂಗಡಿ ಪ್ರಾರಂಭಿಸಿ ಎರಡು ವರ್ಷವಾಗಿದೆ. ಎರಡು ವರ್ಷಗಳಿಂದ ಪೂಜೆ ನಡೆಸುತ್ತಾ ಬಂದಿದ್ದೇನೆ. ಪೂಜೆಗೆ ನಮ್ಮ ಕುಟುಂಬದವರು ನನ್ನ ಸ್ನೇಹಿತರು ಬಂದಿದ್ದರು‌ ಎಂದು ಹೇಳಿದರು.

ಇಂದು ಬಲಿ ಪಾಡ್ಯಮಿ :ದೀಪಾವಳಿ ಹಬ್ಬದ ನಾಲ್ಕನೇ ದಿನದಂದುಬಲಿ ಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಇಂದಿನಿಂದ ಕಾರ್ತಿಕ ಮಾಸ ಆರಂಭವಾಗಿದೆ. ಬಲಿ ಪಾಡ್ಯಮಿಯನ್ನು ಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ನೋಡಲು ಭೂಮಿಗೆ ಆಗಮಿಸುತ್ತಾನೆ ಎಂಬ ನಂಬಿಕೆ ಇದೆ. ಬಲಿ ಚಕ್ರವರ್ತಿ ಭೂಮಿಗೆ ಬರುವ ಹಿನ್ನೆಲೆ ಜನರು ಹೊಸ ಉಡುಪು, ರಂಗೋಲಿ ಹಾಕಿ ಬಲೀಂದ್ರನನ್ನು ಸ್ವಾಗತಿಸುತ್ತಾರೆ. ಇದೇ ವೇಳೆ ಬಲೀಂದ್ರ ತನ್ನ ಪ್ರಜೆಗಳು ಸುಭೀಕ್ಷವಾಗಿ ಬಾಳಲಿ ಎಂದು ಹಾರೈಸುತ್ತಾನೆ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಬಲಿಪಾಡ್ಯಮಿಯನ್ನು ಆಚರಿಸುತ್ತಾರೆ.

ಬಲಿಪಾಡ್ಯಮಿ ದಿನ ಅಭ್ಯಂಜನ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ದಿನ ಕೆಲವರು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಇನ್ನೂ ಕೆಲವರು ಮನೆಯಲ್ಲಿಯೇ ಹಬ್ಬವನ್ನು ಆಚರಿಸುತ್ತಾರೆ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ದೇಶದೆಲ್ಲೆಡೆ ಹಣತೆ ಹಚ್ಚುವುದು, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಗುತ್ತದೆ.

ಇದನ್ನೂ ಓದಿ :ಗಾಳಿ ರೂಪದಲ್ಲಿ ಗರ್ಭಗುಡಿ ಪ್ರವೇಶಿಸಿದ ದೇವಿರಮ್ಮ: ಪವಾಡವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು

ABOUT THE AUTHOR

...view details