ಕರ್ನಾಟಕ

karnataka

By

Published : Jul 2, 2022, 5:17 PM IST

ETV Bharat / state

ಶಿವಮೊಗ್ಗ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ-ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು

ವಾಹನ ಅಪಘಾತದಲ್ಲಿ ಪತ್ರಿಕಾ ವಿತರಕ ಸಾವನ್ನಪ್ಪಿದ್ದಾರೆ.

news paper distributor died by accident in shivamogga
ಶಿವಮೊಗ್ಗ ವಾಹನ ಅಪಘಾತದಲ್ಲಿ ಪತ್ರಿಕಾ ವಿತರಕ ಸಾವು

ಶಿವಮೊಗ್ಗ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಸಾಗರದಲ್ಲಿ ನಡೆದಿದೆ. ಸಾಗರದ ಬೆಳಲಮಕ್ಕಿಯ ನಿವಾಸಿ ಗಣೇಶ್ (25) ಮೃತರು.

ಇಂದು ಮುಂಜಾನೆ ಗಣೇಶ್ ಸೈಕಲ್​ನಲ್ಲಿ ಪೇಪರ್ ಹಾಕಲು ಹೋಗುವಾಗ ಕೆಎಸ್​ಆರ್​ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ರಾಹುಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಕೆಎಸ್​ಆರ್​ಟಿಸಿ ಬಸ್ ಯಲ್ಲಾಪುರ ಕಡೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಜಿಲ್ಲಾ ಪತ್ರಕರ್ತರು ಸಂತಾಪ‌ ಸೂಚಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಒಂದೇ ಮನೆಗೆ ಎರಡು ಬಾರಿ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ - ವಿಡಿಯೋ

ABOUT THE AUTHOR

...view details