ಕರ್ನಾಟಕ

karnataka

By

Published : Feb 9, 2022, 10:38 AM IST

ETV Bharat / state

ಶಿವಮೊಗ್ಗ: ನಿನ್ನೆ ಕೇಸರಿ ಧ್ವಜ ಇಂದು ರಾಷ್ಟ್ರಧ್ವಜ ಹಾರಿಸಿದ ಎನ್​​ಎಸ್‍ಯುಐ

ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್​​ಎಸ್‍ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು.

National flag hoisted in college campus in Shivamogga
ತ್ರಿವರ್ಣ ಧ್ವಜ ಹಾರಿಸಿದ ಎನ್​​ಎಸ್‍ಯುಐ ಕಾರ್ಯಕರ್ತರು

ಶಿವಮೊಗ್ಗ: ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್​​ಎಸ್‍ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು.


ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ ವೇಳೆ ಕೆಲ‌ವು ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದರು. ನಂತರ ಇದನ್ನು ಪೊಲೀಸರು ತೆರವುಗೊಳಿಸಿದ್ದರು. ಇಂದು ಬೆಳಗ್ಗೆ ಎನ್​​ಎಸ್​​​ಯುಐನ ರಾಜ್ಯ ಕಾರ್ಯದರ್ಶಿ ಚೇತನ್, ಮಧುಸೂಧನ್, ಜಿಲ್ಲಾಧ್ಯಕ್ಷ ವಿಜಯ್ ಸೇರಿದಂತೆ ಇನ್ನಿತರರು ಸೇರಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ.

ಇದನ್ನೂ ಓದಿ:ಹಿಜಾಬ್-ಕೇಸರಿ ಸಂಘರ್ಷ : ಶಿವಮೊಗ್ಗ ಕಾಲೇಜು ಎದುರು ಪ್ರತಿಭಟನೆ ವೇಳೆ ಕಲ್ಲು ತೂರಾಟ, 7 ವಿದ್ಯಾರ್ಥಿಗಳಿಗೆ ಗಾಯ

ಈ ವಿಚಾರವನ್ನು ಕಾಲೇಜಿನ ವಾಚ್​​ಮ್ಯಾನ್ ಪ್ರಾಂಶುಪಾಲರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪ್ರಾಂಶುಪಾಲ ಧಜಂಜಯ್, ಎಸ್​​ಪಿ ಲಕ್ಷ್ಮಿ ಪ್ರಸಾದ್ ಹಾಗೂ ಕೋಟೆ ಪೊಲೀಸ್ ಠಾಣೆ ಪಿಐ ಚಂದ್ರಶೇಖರ್ ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ರಾಷ್ಟ್ರ ಧ್ವಜವನ್ನು ಗೌರವಯುತವಾಗಿ ಕೆಳಗಿಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

For All Latest Updates

ABOUT THE AUTHOR

...view details