ಕರ್ನಾಟಕ

karnataka

ETV Bharat / state

'ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಓರ್ವರಿಗೆ ವಾರ್ನಿಂಗ್ ನೀಡಲಾಗಿದೆ'

ನಾಳೆ ಮತ್ತು ನಾಡಿದ್ದು ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಸಲಾಗುತ್ತದೆ. ಈ ಸಭೆಗೆ ಸಿಎಂ ಯಡಿಯೂರಪ್ಪ,‌ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಆಗಮಿಸುತ್ತಿದ್ದಾರೆ. ನಾಯಕತ್ವ ಬದಲಾವಣೆಯ ಬಗ್ಗೆ ಎಲ್ಲರೂ ಅಲ್ಲ, ‌ಒಬ್ಬರು ಮಾತನಾಡುತ್ತಿದ್ದಾರೆ. ಅವರನ್ನು ಕರೆಯಿಸಿ ಮಾತನಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.

By

Published : Jan 1, 2021, 5:00 PM IST

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ

ಶಿವಮೊಗ್ಗ:ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಎಲ್ಲರೂ ಅಲ್ಲ, ‌ಒಬ್ಬರು ಮಾತನಾಡುತ್ತಿದ್ದಾರೆ. ಅವರನ್ನು ಕರೆಯಿಸಿ ಮಾತನಾಡಲಾಗಿದೆ. ಅವರು ಮುಂದೆ ಸುಧಾರಿಸುವ ಭರವಸೆ ಇದೆ ಎಂದು ಪರೋಕ್ಷವಾಗಿ ಯತ್ನಾಳ್ ಹೆಸರು ಸೂಚಿಸದೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ನಾಳೆ ಮತ್ತು ನಾಡಿದ್ದು ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಸಲಾಗುತ್ತದೆ. ಈ ಸಭೆಗೆ ಸಿಎಂ ಯಡಿಯೂರಪ್ಪ,‌ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಆಗಮಿಸುತ್ತಿದ್ದಾರೆ. ನಾಳೆಯ ಕಾರ್ಯಕ್ರಮ ಹರ್ಷಾ ದ ಫರ್ನಾದಲ್ಲಿ ನಡೆಯುತ್ತದೆ. ರಾಜ್ಯ ಬಿಜೆಪಿ ವಿಶೇಷ ಸಭೆ ಎರಡು ದಿನ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಮೊದಲ ಬಾರಿ ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ಜನ ಕಾಂಗ್ರೆಸ್ ಮತ್ತು ಜೆಡಿಎಸ್​ನ್ನು ಪಕ್ಕಕ್ಕೆ ಸರಿಸಿ ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ

ಭಾನುವಾರ ಬೆಳಗ್ಗೆ 9 ಗಂಟೆಗೆ ಪ್ರೇರಣ ಸಭಾಗಂಣದಲ್ಲಿ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರಿಗೆ ಸನ್ಮಾನ ಮಾಡಲಾಗುತ್ತದೆ.‌ ಇದು ಮಾಜಿ ಪರಿಷತ್​​ ಸಭಾಪತಿ‌ ಡಿ.ಎಸ್. ಶಂಕರಮೂರ್ತಿರವರ ಅಧ್ಯಕ್ಷತೆಯಲ್ಲಿ ನಡೆಯುತ್ತದೆ.‌ ಈಗಾಗಲೇ ಎಲ್ಲಾ ತಯಾರಿ ನಡೆಸಲಾಗಿದೆ ಎಂದರು.

ಓದಿ:ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡದ ಅಧಿಕಾರಿ, ಗುತ್ತಿಗೆದಾರನಿಗೆ ಈಶ್ವರಪ್ಪ ತರಾಟೆ

ಸಭೆಗೆ ರಾಜ್ಯದ ಮೂಲೆ ಮೂಲೆಯಿಂದ ವಿಶೇಷ ಆಹ್ವಾನಿತರು ಆಗಮಿಸುತ್ತಿದ್ದಾರೆ. ವಿಶೇಷ ಸಭೆಗೆ ರಾಜ್ಯದ 250ಕ್ಕೂ ಹೆಚ್ಚು ಕಾರ್ಯಕರ್ತರು, 27ಕ್ಕೂ ಅಧಿಕ ವಿಭಾಗಗಳಿಂದ ಸಭೆಗಾಗಿ ಶ್ರಮಿಸುತ್ತಿದ್ದಾರೆ. ಹಿಂದೆ ಬೆಳಗಾವಿಯಲ್ಲಿ ಗೋಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಕಳೆದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಚರ್ಚೆ ನಡೆಸಿ ಜಾರಿಗೆ ತರಲಾಗಿದೆ. ಅದೇ ರೀತಿ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಿ, ಜಾರಿಗೆ ತರಲಾಗುವುದು ಎಂದರು.

ಧರ್ಮೇಗೌಡರ ದುರ್ಮರಣ ರಾಜ್ಯಕ್ಕೆ ಕಳಂಕ. ಚಿಂತಕರ ಚಾವಡಿಯಾದ ಘಟನೆಗೆ ನಾವೆಲ್ಲಾ ತಲೆ ಬಗ್ಗಿಸಬೇಕು. ಅದನ್ನು ಈಗಾಗಲೇ ಲೋಕಸಭೆ ಸ್ಪೀಕರ್ ಹಾಗೂ ರಾಜ್ಯದ ಸಭಾಧ್ಯಕ್ಷರು ಉನ್ನತ ಮಟ್ಟದ ತನಿಖೆ ಆಗಬೇಕು ಎಂದಿದ್ದಾರೆ. ಆದರೆ ಈ ವಿಚಾರ ಸಭೆಯಲ್ಲಿ ಎಷ್ಟರ ಮಟ್ಟಿಗೆ ಚರ್ಚೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ABOUT THE AUTHOR

...view details