ಕರ್ನಾಟಕ

karnataka

ETV Bharat / state

ಶಿವಮೊಗ್ಗ.. ಮಾರಾಕಾಸ್ತ್ರಗಳಿಂದ ಹೊಡೆದು ವ್ಯಕ್ತಿ ಕೊಲೆ; ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ - ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆ

ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆಯ ಚಿಕ್ಕಲ್ ಸಮೀಪ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mallesh
ಮಲ್ಲೇಶ್ ಅಲಿಯಾಸ್ ಮಲ್ಲ

By ETV Bharat Karnataka Team

Published : Nov 14, 2023, 9:57 PM IST

ಶಿವಮೊಗ್ಗ: ದೀಪಾವಳಿ ಹಬ್ಬದ ದಿನ ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಗಾಂಧಿ ಬಜಾರ್ ಧರ್ಮರಾಯನಕೇರಿ ನಿವಾಸಿ ಮಲ್ಲೇಶ್ ಅಲಿಯಾಸ್ ಮಲ್ಲ(35) ಎಂಬ ವ್ಯಕ್ತಿ ಕೊಲೆಗೀಡಾದವರಾಗಿದ್ದಾರೆ.

ನಗರದ ಹೊಳೆಹೊನ್ನೂರು ರಸ್ತೆಯ ಚಿಕ್ಕಲ್ ನಲ್ಲಿ ಮಲ್ಲೇಶ್​​ನನ್ನು ಕೊಲೆ ಮಾಡಲಾಗಿದೆ. ಒಂದೇ ಬೈಕ್ ನಲ್ಲಿ ಬಂದ ಮೂವರು ಯುವಕರು ಮಲ್ಲೇಶ್​​​ನ ಬೈಕ್​​ಗೆ ಡಿಕ್ಕಿ ಹೊಡೆಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಮಲ್ಲೇಶ್ ಮೇಲೇಳುವಷ್ಟರಲ್ಲಿ ಡಿಕ್ಕಿ ಹೊಡೆದು ಬೀಳಿಸಿದ ಯುವಕರೇ ಮಾರಾಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ದಾರೆ. ತೀವ್ರ ಗಾಯಗೊಂಡಿದ್ದ ಮಲ್ಲೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೊಲೆ ಮಾಡಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಯೇ ಕೊಲೆಗೆ ಕಾರಣವಾಯ್ತಾ: ಮಲ್ಲೇಶ್ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಅದು ಆ ಹುಡುಗಿಗೆ ಇಷ್ಡ ಇರಲಿಲ್ಲ. ಆದರೂ ಮಲ್ಲೇಶ್ ಹುಡುಗಿ ಹಿಂದೆ ಬಿದ್ದಿದ್ದ. ಇದರಿಂದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ತನ್ನ ಅಕ್ಕನ ಸಾವಿಗೆ ಕಾರಣನಾಗಿದ್ದ ಮಲ್ಲೇಶ್ ನನ್ನು ಹುಡುಗಿಯ ತಮ್ಮ ಹಾಗೂ ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮಲ್ಲೇಶ್ ಕುರಿ ಕಾಳಗ ನಡೆಸುತ್ತಿದ್ದನಲ್ಲದೇ, ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮಲ್ಲೇಶ್​ನನ್ನು ಕೊಲೆ‌ ಮಾಡಲು ಕಳೆದ ಎರಡು ತಿಂಗಳಿನಿಂದ ಹುಡುಗಿಯ ತಮ್ಮ ಹಾಗೂ ಆತನ ಸ್ನೇಹಿತರು ಸ್ಕೇಚ್ ಹಾಕಿದ್ದರು ಎನ್ನಲಾಗಿದೆ. ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಲು ಕೋಟೆ ಪೊಲೀಸರು ಜಾಲ ಬೀಸಿದ್ದಾರೆ.

ಇದನ್ನೂಓದಿ:ದೀಪಾವಳಿ ಸಂಭ್ರಮದ ಮಧ್ಯೆ ಶಿರಸಿಯಲ್ಲಿ ಒಂದೇ ಮನೆಯ ಮೂರು ಜನ ಸಾವು!

ABOUT THE AUTHOR

...view details