ಶಿವಮೊಗ್ಗ:ನಗರದಲ್ಲಿ ವಿಧಿಸಿದ್ದ ನಿಷೇಧಾಜ್ಞೆ ಅವಧಿಯನ್ನು ಇಂದಿನಿಂದ ಸಡಿಲಿಕೆ ಮಾಡಲಾಗಿದೆ. ಆದರೆ ಮದ್ಯಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ನಿಷೇಧಾಜ್ಞೆ ಅವಧಿ ಸಡಿಲಿಸಿ ಜಿಲ್ಲಾಧಿಕಾರಿ ಆದೇಶ - ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಅವಧಿ ಸಡಿಲಿಕೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಸದ್ಯ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಅವಧಿಯನ್ನು ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ.
![ಶಿವಮೊಗ್ಗ: ನಿಷೇಧಾಜ್ಞೆ ಅವಧಿ ಸಡಿಲಿಸಿ ಜಿಲ್ಲಾಧಿಕಾರಿ ಆದೇಶ Prohibition Timings relaxed by Shimoga DC](https://etvbharatimages.akamaized.net/etvbharat/prod-images/768-512-14639050-thumbnail-3x2-bngjpg.jpg)
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಅವಧಿ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ
ನಗರದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಉಂಟಾಗಿದ್ದ ಗಲಭೆ, ಕಲ್ಲು ತೂರಾಟದಿಂದಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಚೊಚ್ಚಲ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಏನು?