ಕರ್ನಾಟಕ

karnataka

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ.. ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

By

Published : Aug 7, 2020, 6:39 PM IST

ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಬಿಸಿಯೂಟ ನೌಕರರಿಗೆ ಸುರಕ್ಷತಾ ಪರಿಕರಗಳನ್ನು ನೀಡಬೇಕು. ಅಷ್ಟೇ ಅಲ್ಲ, ₹7500 ವೇತನ ನೀಡಬೇಕು..

ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದಲ್ಲಿ ಪ್ರತಿಭಟನೆ

ಅನೇಕ ದಿನಗಳಿಂದ ಹೋರಾಟ ಮಾಡುತ್ತಾ ಬಂದರೂ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ. ಈ ಹಿನ್ನೆಲೆ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದೇವೆ. ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಬಿಸಿಯೂಟ ನೌಕರರಿಗೆ ಸುರಕ್ಷತಾ ಪರಿಕರಗಳನ್ನು ನೀಡಬೇಕು. ಅಷ್ಟೇ ಅಲ್ಲ, ₹7500 ವೇತನ ನೀಡಬೇಕು. ಏಪ್ರಿಲ್​ನಿಂದ ವೇತನ ಬಂದಿಲ್ಲ. ಅದನ್ನು ಆದಷ್ಟು ಬೇಗ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ನೌಕರರಿಗೆ ಕನಿಷ್ಠ 6 ತಿಂಗಳವರೆಗೆ ಪಡಿತರವನ್ನು ಒದಗಿಸಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.

ABOUT THE AUTHOR

...view details