ಶಿವಮೊಗ್ಗ: ಎಂಪಿಎಂಗೆ ಲೀಸ್ಗೆ ನೀಡಿದ್ದ 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್ ಪಡೆದು ಅರಣ್ಯ ಇಲಾಖೆಗೆ ನೀಡುವಂತೆ ಆಗ್ರಹಿಸಿ ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಂಪಿಎಂ ಕಾರ್ಖಾನೆಗೆ ಲೀಸ್ಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯುವಂತೆ ಪ್ರತಿಭಟನೆ - ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ವತಿಯಿಂದ ಪ್ರತಿಭಟನೆ
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 33 ಸಾವಿರ ಹೆಕ್ಟೇರ್ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್ಗೆ ನೀಡಲಾಗಿತ್ತು.
![ಎಂಪಿಎಂ ಕಾರ್ಖಾನೆಗೆ ಲೀಸ್ಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯುವಂತೆ ಪ್ರತಿಭಟನೆ Protest to withdraw forest land given to MPM factory In Shimoga](https://etvbharatimages.akamaized.net/etvbharat/prod-images/768-512-9240400-714-9240400-1603169505373.jpg)
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 33 ಸಾವಿರ ಹೆಕ್ಟೇರ್ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್ಗೆ ನೀಡಲಾಗಿತ್ತು. ಆದರೆ ಈಗ ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡಿದೆ. ಹಾಗೆಯೇ ಅದರಂತೆ ಎಂಪಿಎಂಗೆ ಲೀಸ್ಗೆ ನೀಡಿದ್ದ ಅವಧಿ ಮುಗಿದಿದೆ. ಹಾಗಾಗಿ ಸರ್ಕಾರ ಭೂಮಿಯನ್ನು ಕಬಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಾಗದ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡಿ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ಲೀಸ್ಗೆ ನೀಡುವ ಮೂಲಕ ಅಕೇಶಿಯ ಮರಗಳನ್ನು ಬೆಳೆಸಲು ಮುಂದಾಗಿದೆ. ಇದರಿಂದ ಮಲೆನಾಡು ಬಯಲುಸೀಮೆ ಆಗುತ್ತದೆ. ಹಾಗಾಗಿ ಸರ್ಕಾರ 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿ ಕಾಡು ಬೆಳೆಸಬೇಕು. ಯಾವುದೇ ಕಾರಣಕ್ಕೂ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.